CrimeNEWSನಮ್ಮರಾಜ್ಯ

ಲೈಂಗಿಕ ಕಿರುಕುಳ ನೀಡಿ ಓಡುತ್ತಿದ್ದವನ ಸಿನಿಮೀಯ ರೀತಿಯಲ್ಲಿ ಹಿಡಿದ ಯುವತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:ತರಕಾರಿ ತರಲು ಮನೆಯಿಂದ ಹೊರ ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಓಡಿಹೋಗುತ್ತಿದ್ದ ಕಾಮುಕನ ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಹಿಡಿದ ಯುವತಿ ಪೊಲೀಸರಿಗೆ ಒಪ್ಪಿಸಿದ್ದು ಸದ್ಯ ಆತ ಈಗ ಕಂಬಿ ಎಣಿಸುತ್ತಿದ್ದಾನೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ನಡೆದ ಘಟನೆ: ಏಪ್ರಿಲ್‌ 25ರಂದು ತರಕಾರಿ ತರುವ ಸಲುವಾಗಿ ಮನೆಯಿಂದ ಹೊರ ಬರುತ್ತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ಕಾಮುಕ ಆಕೆಗೆ ಲೈಂಗಿಕ ಕಿರುಕುಳ ನೀಡಿ ಓಡಿಹೋಗುತ್ತಿದ್ದ ಆದರೆ ಆತನನನ್ನು ಯುವತಿ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

25 ವರ್ಷದ ಯುವತಿ ತರಕಾರಿ ತರಲು ಮನೆಯಿಂದ ಒಂಟಿಯಾಗಿ ಹೋಗುತ್ತಿದ್ದರು. ಆಗ ಆರೋಪಿ ಯುವಕ ಯುವತಿಯ ಬಳಿ ಬಂದು ಗುಪ್ತಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈವೇಳೆ ರಕ್ಷಣೆ ಗಾಗಿ ಆಕೆ ಕೂಗಾಡಿದ್ದಾರೆ. ಅಷ್ಟರಲ್ಲಿ ಜನ ಕೇಳಿಸಿಕೊಂಡು ಸಹಾಯಕ್ಕೆ ಧಾವಿಸುತ್ತಿದ್ದನ್ನು ತಿಳಿದ ಆರೋಪಿ ಓಡಿಹೋಗಲು ಶುರುಮಾಡಿದ್ದಾನೆ. ಈ ವೇಳೆ ಆಕೆಯಿಂದ ಬಿಡಿಸಿಕೊಳ್ಳಲು ಆಕೆಯ ಕೈಯನ್ನು ಕಚ್ಚಿಬಿಡಿಸಿಕೊಂಡು ಓಡಿದ್ದಾನೆ. ಆದರೂ ಆತನ ಬೆನ್ನಟ್ಟಿದ ಯುವತಿ ತಾನೇ ಆರೋಪಿಯನ್ನು ಹಿಡಿದುಕೊಂಡು ಮುಖ್ಯರಸ್ತೆಗೆ ಎಳೆದು ತಂದಿದ್ದಾರೆ. ಅಷ್ಟರಲ್ಲೇ ಸ್ಥಳೀಯರು ರಕ್ಷಣೆಗೆ ಬಂದಿದ್ದಾರೆ. ನಂತರ ಸ್ಥಳೀಯರು ಆತನನ್ನು ಥಳಿಸಿದ್ದರು ಎಂದು ಪೊಲೀಸರು ತಿಳಿಸಿದರು.

ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕಾಟನ್‌ ಪೇಟೆಯ ಸಿದ್ದಾರ್ಥ ನಗರದ ನಿವಾಸಿ ಮುಹಮ್ಮದ್ ಫಯಾಝ್ (21) ಬಂಧಿತ ಆರೋಪಿಯಾಗಿದ್ದಾನೆ.

ಈತ ಪ್ಲಂಬರ್ ಕೆಲಸ ಮಾಡುತ್ತಿದ್ದ, ಅಲ್ಲದೇ ಸರ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದ. ಈತನ ವಿರುದ್ಧ ಕೆಂಗೇರಿ ಸೇರಿ ಹಲವು ಠಾಣೆಗಳಲ್ಲಿ ಹಲವು ಕಳವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!