CrimeNEWSನಮ್ಮಜಿಲ್ಲೆ

ಲಿಂಗಧೀರನಹಳ್ಳಿ ತ್ಯಾಜ್ಯ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ – ಎಎಪಿ ಬೆಂಬಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಶವಂತಪುರ ವಿಧಾನಸಭಾ ಕೇತ್ರದ ಲಿಂಗಧೀರನಹಳ್ಳಿಯಲ್ಲಿರುವ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯರು ನಡೆಸುತ್ತಿರುವ ಪ್ರತಿಭಟನೆಗೆ ಆಮ್‌ ಆದ್ಮಿ ಪಾರ್ಟಿ ಬೆಂಬಲ ನೀಡಿದೆ.

ಕಳೆದ ಎಂಟು ದಿನಗಳಿಂದ ಪ್ರತಿಭಟನಾಕಾರರ ಜತೆಗಿರುವ ಯಶವಂತಪುರ ಕ್ಷೇತ್ರದ ಎಎಪಿ ಸಂಭಾವ್ಯ ಅಭ್ಯರ್ಥಿ ಶಶಿಧರ ಆರಾಧ್ಯ ಮಾತನಾಡಿ, “ತ್ಯಾಜ್ಯ ಸಂಸ್ಕರಣಾ ಘಟಕದಿಂದಾಗಿ ಲಿಂಗಧೀರನಹಳ್ಳಿ ಪರಿಸರ ಸಂಪೂರ್ಣ ಹಾಳಾಗಿದೆ. ಹಲವು ವರ್ಷಗಳಿಂದ ಇಲ್ಲಿನ ಸ್ಥಳೀಯರು ಪದೇಪದೇ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

ಇನ್ನು ಸುತ್ತಮುತ್ತಲಿನ ಜನರ ಆರೋಗ್ಯ ಹಾಗೂ ಜೀವದ ಜತೆ ರಾಜ್ಯ ಸರ್ಕಾರ, ಸ್ಥಳೀಯ ಶಾಸಕ ಎಸ್.ಟಿ.ಸೋಮಶೇಖರ್‌ ಹಾಗೂ ಬಿಬಿಎಂಪಿ ಚೆಲ್ಲಾಟವಾಡುತ್ತಿದೆ. ಯಶವಂತಪುರವನ್ನು ಕಸವಂತಪುರವನ್ನಾಗಿ ಮಾಡುತ್ತಿರುವುದು ಖಂಡನೀಯ ಎಂದು ಹೇಳಿದರು.

ಬೆಂಗಳೂರಿನ ಹಲವು ಭಾಗಗಳ ಕಸವನ್ನು ಲಿಂಗಧೀರನಹಳ್ಳಿಯಲ್ಲಿ ಸುರಿಯುತ್ತಿರುವುದರಿಂದ ಇಲ್ಲಿ ನೊಣಗಳ ಕಾಟ ವಿಪರೀತವಾಗಿದೆ. ಅಡುಗೆಗೂ ನೊಣಗಳು ಬಂದು ಬೀಳುವಷ್ಟು ದೊಡ್ಡ ಪ್ರಮಾಣದಲ್ಲಿ ಸಮಸ್ಯೆ ಎದುರಾಗಿದೆ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಣ್ಣ ಗಾಳಿ ಬೀಸಿದರೂ ಊರ ತುಂಬಾ ಕೆಟ್ಟ ವಾಸನೆ ಬರುತ್ತಿದೆ. ಎಲ್ಲರಂತೆ ಇಲ್ಲಿನ ಜನರು ಕೂಡ ಸರ್ಕಾರಕ್ಕೆ ನಾನಾ ರೀತಿಯ ತೆರಿಗೆಗಳನ್ನು ಕಟ್ಟುತ್ತಾರೆ. ಅದಕ್ಕೆ ಪ್ರತಿಯಾಗಿ ಸರ್ಕಾರವು ಇಂತಹ ಕೆಟ್ಟ ವಾತಾವರಣವನ್ನು ನಿರ್ಮಿಸಿಕೊಟ್ಟಿರುವುದು ದುರಂತ. ಶೀಘ್ರವೇ ಈ ಘಟಕವನ್ನು ಯಾವುದಾದರೂ ನಿರ್ಜನ ಪ್ರದೇಶಕ್ಕೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು