ವಿದೇಶ

ವೈಜ್ಞಾನಿಕ ರೀತಿ ಹಕ್ಕಿಜ್ವರ ಕೋಳಿಗಳ ನಾಶ: ಸಚಿವ ಪ್ರಭು ಚವ್ಹಾಣ್

ಮೈಸೂರು- ದಾವಣಗೆರೆ ಜಿಲ್ಲೆಯ ಬನ್ನಿಕೋಡದಲ್ಲಿ ಹಕ್ಕಿಜ್ವರ ಹಿನ್ನೆಯಲ್ಲಿ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಬೀದರ:  ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕುಂಬಾರಕೊಪ್ಪಲು ಗ್ರಾಮದಲ್ಲಿರುವ ಮಾಂಸದ ಕೋಳಿ ಫಾರ್ಮ್‍ನಲ್ಲಿರುವ (ಅಶ್ವಿನಿ ಕೋಳಿ ಫಾರಂ) ಸುಮಾರು 4500 ಮಾಂಸದ ಕೋಳಿಗಳನ್ನು ಹಾಗೂ 4500 ಹಿತ್ತಲ ಕೋಳಿಗಳನ್ನು ಬುಧವಾರ  ಕಲ್ಲಿಂಗ್ (ವೈಜ್ಞಾನಿಕವಾಗಿ ನಾಶ) ಮಾಡಲಾಗುತ್ತದೆ ಎಂದು ಪಶುಸಂಗೋಪನೆ  ಸಚಿವ  ಪ್ರಭು ಚವ್ಹಾಣ್   ತಿಳಿಸಿದ್ದಾರೆ.

ಅಲ್ಲದೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬನ್ನಿಕೋಡ ಗ್ರಾಮದಲ್ಲಿ 157 ಕುಟುಂಬಗಳಲ್ಲಿ 1167 ನಾಟಿ ಕೋಳಿಗಳಿದ್ದು, ಅವುಗಳನ್ನು ಸಹ ಇಂದಿನಿಂದ ವೈಜ್ಞಾನಿಕ ರೀತಿಯಲ್ಲಿ ಇಲಾಖೆಯ ಅಧಿಕಾರಿಗಳು ನಾಶ ಮಾಡಲಿದ್ದಾರೆ ಎಂದು ತಿಳಿಸಿದರು.

ಇತ್ತಿಚೇಗೆ ಮೈಸೂರು ಮಹಾನಗರ ವ್ಯಾಪ್ತಿಯ ಕುಂಬಾರಕೊಪ್ಪಲು ಮತ್ತು  ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬನ್ನಿಕೋಡ ಗ್ರಾಮದದಿಂದ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸ್ಥಂಸ್ಥೆ ಹೆಬ್ಬಾಳ ಬೆಂಗಳೂರಿಗೆ ವಿಶ್ಲೇಷಣೆಗೆ ಸಲ್ಲಿಸಲಾದ ಮಾದರಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದ್ದು ಹೆಚ್ಚಿನ ತಪಾಸಣೆಗಾಗಿ ನಿಯಮದಂತೆ ಭೂಪಾಲದ ನಿಹ್ಷಾದ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿಯೂ ಸಹ ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರದ ವೈರಾಣು ಹೆಚ್5ಎನ್1 ಸೋಂಕು ಇರುವುದು ಧೃಡಪಟ್ಟಿದೆ. ಹೀಗಾಗಿ  ಕೇಂದ್ರ ಸರ್ಕಾರ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯಿಂದ ಅಧಿಕೃತವಾಗಿ ಆದೇಶವನ್ನು ಸಹ ನೀಡಿದೆ ಎಂದರು.

ಕೇಂದ್ರ ಸರ್ಕಾರದ ಕೋಳಿ ಶೀತ ಜ್ವರ ನಿಯಂತ್ರಣ ಮತ್ತು ತಡೆಗಟ್ಟುವ ಮಾರ್ಗಸೂಚಿಗಳ ಅನ್ವಯ ರೋಗೋದ್ರೇಕ ಕಾಣಿಸಿಕೊಂಡಿರುವ ಮೈಸೂರು ಮಹಾನಗರ ಪಾಲಿಕೆ ವ್ಯಾಪಿಯಲ್ಲಿನ ಕುಂಬಾರಕೊಪ್ಪಲು ಹಾಗೂ ಹರಿಹರ ತಾಲೂಕಿನ ಬನ್ನಿಕೋಡ ಗ್ರಾಮದ ಒಂದು ಕೀಮೀ ವ್ಯಾಪ್ತಿಯಲ್ಲಿನ ಪ್ರದೇಶವನ್ನು ರೋಗ ಪೀಡಿತ ವಲಯ ಎಂದು ಹಾಗೂ 1 ರಿಂದ 10 ಕೀಮೀ ವ್ಯಾಪ್ತಿಯ ಪ್ರದೇಶವನ್ನು ಜಾಗೃತ ವಲಯ ಎಂದು ಘೋಷಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಾಗಿದೆ ಎಂದು ಹೇಳಿದರು.

ಸೋಂಕು ತಗುಲಿದ ವ್ಯಾಪ್ತಿಯಲ್ಲಿ ಲಭ್ಯವಿರುವ ಮೊಟ್ಟೆಗಳನ್ನು ಸಹ ನಾಶ ಮಾಡಲು ಕ್ರಮ ವಹಿಸಲಾಗುತ್ತಿದೆ. ಪ್ರತಿ ಮೊಟ್ಟೆಗೆ ರೂ.3 ರಂತೆ ಕುಕ್ಕುಟ ಆಹಾರಕ್ಕೆ ಪ್ರತಿ 1 ಕೆ.ಜಿ.ಗೆ ರೂ.12 ರಂತೆ ಪರಿಹಾರ ನೀಡಲಾಗುವುದು.

ಮೈಸೂರು ಹಾಗೂ ದಾವಣೆಗೆರೆಯಲ್ಲಿ ಸುಮಾರು 10167 ಕೋಳಿಗಳನ್ನು ಕಲ್ಲಿಂಗ್ ಮಾಡಲಾಗುತ್ತದೆ. ಕೋರೊನಾ ಭೀತಿಯಿಂದ ಕೋಳಿ ಮಾಂಸದ ಸೇವನೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರಿಂದಾಗಿ ಕೋಳಿ ಸಾಕಾಣಿಕೆ ಮತ್ತು ಮಾರಾಟದ ವೆಚ್ಚದಲ್ಲಿ ಸಾಕಷ್ಟು ವ್ಯತ್ಯಾಸ ಕಂಡುಬಂದಿದ್ದು ಮುಂದಿನ ನಷ್ಟವನ್ನು ತಪ್ಪಿಸಲು ಅನೇಕ ಫಾರಂ ಮಾಲೀಕರು ಕೋಳಿಗಳನ್ನು ಸ್ವಯಿಚ್ಚೆಯಿಂದ ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿದ್ದಾರೆ. ಇವುಗಳಿಗೆ ಯಾವುದೇ ರೀತಿಯ ಪರಿಹಾರ ಸರ್ಕಾರದಿಂದ ದೊರೆಯುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ