CrimeNEWSನಮ್ಮಜಿಲ್ಲೆ

ವಾಂತಿ ಮಾಡಲು ಬಸ್‌ ಕಿಟಕಿಯ ಹೊರಗೆ ತಲೆಹಾಕಿದ ಮಹಿಳೆ ತಲೆ ಕೊಚ್ಚಿಕೊಂಡು ಹೋದ ಟಿಪ್ಪರ್‌ ಲಾರಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ರಸ್ತ ಸಾರಿಗೆ ಸಂಸ್ಥೆಯ ಬಸ್ ಮತ್ತು ಟಿಪ್ಪರ್ ನಡುವಿನ ಓವರ್​​ಟೇಕ್​ ವೇಳೆ ಆದ ಅಪಘಾತದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ಇಂದು (ಜ.25) ಸಂಭವಿಸಿದೆ.

ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (50) ಮೃತ ಮಹಿಳೆ. ಶಿವಲಿಂಗಮ್ಮ ಅವರು ಮೈಸೂರಿನಿಂದ ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ KSRTC ಬಸ್ ಪ್ರಯಾಣಿಸುತ್ತಿದ್ದರು.

ಈ ಸಂದರ್ಭದಲ್ಲಿ ವಾಂತಿ ಬರುತ್ತಿದ್ದರಿಂದ ಸಿಂಧುವಳ್ಳಿ ಗ್ರಾಮದ ಬಳಿ ಮಹಿಳೆಯು ಬಸ್​​ನ ಕಿಟಕಿಯಿಂದ ಕತ್ತನ್ನು ವಾಮೀಟ್‌ ಮಾಡುವ ಸಲುವಾಗಿ ಹೊರಹಾಕಿದ್ದು, ಅದೇ ಸಮಯದಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಕ್ಷಣಾರ್ಧದಲ್ಲಿ ಆಕೆಯ ತಲೆ ಮತ್ತು ಬಾಯಿ ಹಿಡಿದುಕೊಂಡಿದ್ದ ಕೈಯನ್ನು ಕೊಟ್ಟಿಕೊಂಡಿ ಹೋಗಿದೆ.

ಈ ಅಪಘಾತದ ಪರಿಣಾಮ ಶಿವಲಿಂಗಮ್ಮ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಒದ್ದಾಡಿ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಸಿದ್ದರಾಜು ಮತ್ತು ಸಿಬ್ಬಂದಿ ಮಹೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಬಸ್ಸನ್ನು ವಶಕ್ಕೆ ಪಡೆದರು. ಇನ್ನು ಇಟ್‌ ಆಂಡ್‌ ರನ್‌ ಮಾಡಿಕೊಂಡು ಹೋಗಿರುವ ಟಿಪ್ಪರ್ ಲಾರಿಯ ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

ಮೃತ ಶಿವಲಿಂಗಮ್ಮ ಅವರ ಪಾರ್ಥಿವಾ ಶರೀರವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ