NEWSನಮ್ಮಜಿಲ್ಲೆ

ವಂದತಿಗಳಿಗೆ ಕಿವಿಗೊಡಬೇಡಿ ನಾನು ಜೆಡಿಎಸ್ ತೊರೆಯಲ್ಲ: ಶಾಸಕ ಕೆ.ಮಹದೇವ್ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ನನಗೆ ರಾಜಕೀಯವಾಗಿ ಜನ್ಮ ನೀಡಿದ ಜನತಾದಳ ಹಾಗೂ ನೆಲೆಕೊಟ್ಟಿರುವ ಜೆಡಿಎಸ್ ಪಕ್ಷವನ್ನು ಎಂದಿಗೂ ತೊರೆಯುವವುದಿಲ್ಲ ಎಂದು ಕೆ.ಮಹದೇವ್ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಶಾಸಕರ ಕಾರ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಇತ್ತೀಚೆಗೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿರುವ ಬಗ್ಗೆ ವರದಿಯಾದ ನಂತರ ಜಿಟಿಡಿ ಬಂಬಲಿಗ ಮಹದೇವ್ ಕೂಡ ಜೆಡಿಎಸ್ ತೊರೆಯುತ್ತಿದ್ದಾರೆ ಎಂದು ಕೆಲ ಮಾಧ್ಯಮಗಳು ಹಾಗೂ ವಿಪಕ್ಷಗಳು ಸುಳ್ಳುಸುದ್ದಿ ಹಬ್ಬಿಸುತ್ತಿವೆ. ಇಂತ ವಂದತಿಗಳಿಗೆ ನಮ್ಮ ಕಾರ್ಯಕರ್ತರು ಕಿವಿಗೊಡಬಾರದು ಎಂದು ತಿಳಿಸಿದರು.

ಸದ್ಯದಲ್ಲಿಯೇ ಜಿಲ್ಲಾ ಪಂಚಾಯಿತಿ ಹಾಗೂ ತಾಪಂ ಚುನಾವಣೆಗೆ ಸಜ್ಜಾಗುವಂತೆ ತಿಳಿಸಿದ ಅವರು ನಾನು ಯಾವುದೇ ಮಾಧ್ಯಮಗಳ ಮುಂದೆ ಅಥವಾ ಪತ್ರಿಕೆಗಳಿಗೆ ಜೆಡಿಎಸ್ ಪಕ್ಷವನ್ನು ಬಿಟ್ಟು ಕಾಂಗ್ರೆಸ್‌ಗೆ ಸೇರುತ್ತೇನೆ ಎಂದು ಹೇಳಿಕೆ ನೀಡಿಲ್ಲದಿದ್ದರೂ ಕೆಲವು ಮಾಧ್ಯಮಗಳು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಇದು ಶುದ್ಧ ಸುಳ್ಳಾಗಿದೆ ಹಾಗಾಗಿ ಜೆಡಿಎಸ್ ಬಿಡುವ ಮಾತಿಲ್ಲ. ನನ್ನ ರಾಜಕೀಯ ಜೀವನ ಆರಂಭವಾಗಿದ್ದು ಜನತಾದಳದಿಂದ ಅಂದಿನಿಂದ ಇಂದಿನವರೆಗೂ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿ ಇಂದು ಶಾಸಕನಾಗಿದ್ದೇನೆ. ಮುಂದೆಯೂ ಜೆಡಿಎಸ್ ನಲ್ಲಿಯೇ ಆದ್ದರಿಂದ ಸುಳ್ಳುಸುದ್ದಿಗೆ ಕಿಗೊಡಬೇಡಿ ಎಂದರು.

ಇನ್ನು ಈ ಹಿಂದೆಯೂ ಬಿಜೆಪಿಗೆ ಅನೇಕರು ಸೇರ್ಪಡೆಯಾಗುವಂತೆ ಸಲಹೆ ನೀಡಿದ್ದರೂ ನನ್ನ ನಿಷ್ಠೆ ಜೆಡಿಎಸ್ ಪಕ್ಷಕ್ಕೆ ಎಂದು ಹೇಳಿದ್ದೆ. ಆದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಚಿಂತೆಯು ಮಾಡಿಲ್ಲ, ವಿಪಕ್ಷದವರು ಮತ್ತು ಆ ಪಕ್ಷದ ಕಾರ್ಯಕರ್ತರು ಜಿಪಂ ಮತ್ತು ತಾಪಂ ಚುನಾವಣೆ ಮುಂದಿಟ್ಟುಕೊಂಡು ಸುಳ್ಳಿನ ಸರಮಾಲೆಯನ್ನೆ ಹಬ್ಬಿಸುತ್ತಿದ್ದಾರೆ ಅವರ ಯಾರ ಮಾತಿಗೂ ಕಿವಿ ಕೊಡಬಾರದು ಎಂದರು.

ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣ ಶೆಟ್ಟಿ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್. ರವಿ, ಜಿಪಂ ಮಾಜಿ ಸದಸ್ಯ ಶಿವಣ್ಣ, ತಾಪಂ ಮಾಜಿ ಅಧ್ಯಕ್ಷ ಜವರಪ್ಪ, ಮುಖಂಡರಾದ ಕುಮಾರ, ದೊರೆಕೆರೆ ನಾಗೇಂದ್ರ ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು