NEWS

ವಾಲ್ಮೀಕಿ ಮಠದ ಸ್ವಾಮೀಜಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ವಾಲ್ಮೀಕಿ ಮಠದ ಸ್ವಾಮೀಜಿ ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೋವೊಂದು ವೈರಲ್ ಆಗಿದ್ದು, ಅವರು ಬಳಸಿರುವ ಭಾಷೆ, ದ್ವೇಷದ ಮಾತುಗಳು ಪೀಠಾಧಿಪತಿಗಳ ವಿರುದ್ಧ ಬೊಟ್ಟು ಮಾಡುವಂತಿದೆ.

ಸ್ವಾಮೀಜಿಗಳು ಅಂದ್ರೆ ಭಕ್ತರಿಗೆ ಸನ್ಮಾರ್ಗ ತೋರಿಸುವ ದಾರಿದೀಪ. ಸ್ವಾಮೀಜಿಗಳು ನಡೆದಾಡುವ ದೇವರೆಂದೇ ತಿಳಿದಿರುವ ಭಕ್ತಗಣ ಇದನ್ನು ಕೇಳಿದ್ರೆ ಅನುಮಾನದಿಂದ ನೋಡುವಂತಾಗಿದೆ. ಭಾರತೀಯ ಪರಂಪರೆಯಲ್ಲಿ ಸ್ವಾಮೀಜಿಗಳಿಗೆ ಪವಿತ್ರ ಸ್ಥಾನವಿದೆ. ಸರ್ವಸಂಗ ಪರಿತ್ಯಾಗಿಗಳಾದ ಸ್ವಾಮೀಜಿಗಳು ಸರಳ, ಮೃದು ಸ್ವಭಾವದ ಸಾತ್ವಿಕ ಜೀವನ.

ಮನುಕುಲದ ಉದ್ಧಾರಕ್ಕೆ ಜಾತಿ, ಮತ, ಪಂಥಗಳನ್ನು ಮೀರಿ ಅಧ್ಯಾತ್ಮ ಜೀವಿಯಾಗಿ ಬಾಳುತ್ತಾರೆ. ಭಕ್ತಿಯ ಬೀಜಗಳನ್ನು ಬಿತ್ತಿ ಸಮಾಜಕ್ಕೆ ಬೆಳಕು ಚೆಲ್ಲುತ್ತಾರೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಕೆಲ ಸ್ವಾಮೀಜಿಗಳ ಬದುಕು ಭಕ್ತಿಯ ಹಳಿ ತಪ್ಪಿದಂತಿದೆ. ಸ್ವಾರ್ಥ, ಸ್ವಜನಪಕ್ಷಪಾತ, ದ್ವೇಷ, ಮತ್ಸರ ಮೇಳೈಸಿದಂತಿದೆ.

ವಾಲ್ಮೀಕಿ ಸಮುದಾಯದ ಜನರ ಸರ್ವಾಂಗೀಣ ಅಭಿವೃದ್ಧಿಗಾಗಿ ದಾವಣಗೆರೆ ಜಿಲ್ಲೆ ರಾಜನಹಳ್ಳಿಯ ತುಂಗಭದ್ರೆಯ ತಟದಲ್ಲಿ ಸ್ವಾಪಿತವಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠಕ್ಕೆ ತನ್ನದೇ ಆದ ಪರಂಪರೆ ಇದೆ. ಸದ್ಯ ಈ ಪೀಠಕ್ಕೆ ಪ್ರಸನ್ನಾನಂದಪುರಿ ಸ್ವಾಮೀಜಿ ಪೀಠಾಧ್ಯಕ್ಷರಾಗಿದ್ದಾರೆ. ಆದ್ರೆ ಸ್ವಾಮೀಜಿ ಇತ್ತೀಚೆಗೆ ತಮ್ಮ ವಿವಾದಿತ ಮಾತುಗಳಿಂದಲೇ ಸುದ್ದಿಯಾಗ್ತಿದ್ದಾರೆ.

ಸದ್ಯ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ. ಹಿರಿಯ ಹಾಗೂ ಕಿರಿಯ ಸ್ವಾಮೀಜಿಗಳ ನಡುವೆ ಮಾತುಕತೆ ನಡೆದಿದ್ದು ಅಶ್ಲೀಲ ಮಾತುಗಳು ಆಡಿಯೋದಲ್ಲಿ ಕೇಳಿಸಿವೆ.

ಭಕ್ತಿಯ ಪ್ರವಚನಗಳ ಮೂಲಕ ವಿಶ್ವಕ್ಕೆ ಜ್ಞಾನ ಪ್ರಸಾರ ಮಾಡುತ್ತಾ ಸಾಮಾನ್ಯರಲ್ಲೇ ಸಾಮಾನ್ಯರಂತೆ ಬದುಕಿದ ಪರಂಪರೆ ವಾಲ್ಮೀಕಿ ಪೀಠದ ಸ್ವಾಮೀಜಿಗಳದ್ದು. ಆದರೆ ಇಲ್ಲಿ ಪ್ರಸನ್ನಾನಂದ ಸ್ವಾಮೀಜಿ ಮಾತುಗಳನ್ನು ಕೇಳಿ, ಮಾಜಿ ಸಚಿವ ಶ್ರೀರಾಮುಲು ಬಗ್ಗೆಯೂ ಮಾತನಾಡಿರುವ ಸ್ವಾಮೀಜಿ ಅಯೋಗ್ಯ, ಉಗ್ರವಾದಿ, ಬಟ್ಟೆ ಬಿಚ್ಚಿಸ್ತೀನಿ ಅನ್ನೋ ಮಾತುಗಳನ್ನು ಆಡಿದ್ದಾರೆ.

ಈ ಆಡಿಯೋ ಬಗ್ಗೆ ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅದೇನೇ ಇರಲಿ ಮಠಾಧಿಪತಿಗಳು ಭಕ್ತರಿಗೆ ಸನ್ಮಾರ್ಗ ತೋರಿಸುವ ದಾರಿದೀಪ. ಅಂಧಕಾರವನ್ನು ತೊಲಗಿಸಿ ವಿಶ್ವಪ್ರೇಮತ್ವ ಸಾರುವ ಸ್ವಾಮೀಜಿಗಳ ಇಂತಹ ನಡೆ ಭಕ್ತರ ಮನಸ್ಸನ್ನ ಘಾಸಿ ಮಾಡ್ತಿರೋದಂತೂ ಸುಳ್ಳಲ್ಲ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು