CrimeNEWSನಮ್ಮರಾಜ್ಯಸಂಸ್ಕೃತಿ

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮನಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ

ವಿಜಯಪಥ ಸಮಗ್ರ ಸುದ್ದಿ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಖ್ಯಾತಿಗೆ ಪಾತ್ರವಾಗಿರುವ ಬಲರಾಮ (67) ಆನೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರೆವೇರಿಸಲಾಯಿತು.

ನಾಗರಹೊಳೆ ಉದ್ಯಾನದ ಹುಣಸೂರು ವಲಯದ ಭೀಮನಕಟ್ಟೆ ಆನೆಕ್ಯಾಂಪಿನಲ್ಲಿ ಭಾನುವಾರ ಅನಾರೋಗ್ಯದಿಂದ ಮೃತಪಟ್ಟಿದ್ದ ಬಲರಾಮ.

ಹುಣಸೂರು ವಲಯದ ಭೀನಮಕಟ್ಟೆ ಸಾಕಾನೆ ಶಿಬಿರದಲ್ಲಿ ಕ್ಷಯರೋಗದಿಂದ ಮೃತಪಟ್ಟ ಬಲರಾಮ ಆನೆಯನ್ನು ಹುಣಸೂರು ವನ್ಯಜೀವಿ ವಲಯದ ಕಾರೆಕಟ್ಟೆ ಅರಣ್ಯ ಪ್ರದೇಶದಲ್ಲಿ ಪೂಜೆ, ವಿಧಿವಿಧಾನ ನೆರವೇರಿಸಿ, ಸರ್ಕಾರಿ ಗೌರವ ಸಲ್ಲಿಸಿ, ಮೂರು ಸುತ್ತು ಕುಶಲತೋಪು ಹಾರಿಸಿದ ನಂತರ ಮಣ್ಣಿನಲ್ಲಿ ಹೂಳುವ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಅರಮನೆ ಗೌರವ: ಮೈಸೂರು ಅರಸರ ಕುಟುಂಬದ ಶೃತಿ ಕೀರ್ತಿದೇವಿ ಅರಸು ಅವರು ಅರಮನೆಯ ಪುರೋಹಿತರೊಂದಿಗೆ ಆಗಮಿಸಿ ಶಾಸ್ತ್ರೋಕ್ತವಾಗಿ ಆನೆಗೆ ಅಂತಿಮ, ಪೂಜೆ ಮತ್ತು ವಿಧಿವಿಧಾನಗಳನ್ನು ನೆರವೇರಿಸಿದರು.

ಭಾವುಕ ವಿದಾಯ: ಬಲರಾಮನ ಅಂತ್ಯ ಸಂಸ್ಕಾರದ ವೇಳೆ ಮಾವುತ, ಅರಣ್ಯ ಇಲಾಖೆಯ ಸಿಬ್ಬಂದಿ, ಪಶು ವೈದ್ಯರು ಭಾವುಕರಾಗಿದ್ದರು. ಸೌಮ್ಯ ಸ್ವಭಾವದ ಬಲರಾಮನನ್ನು ನೆನೆದು ಸಿಬ್ಬಂದಿ ವರ್ಗ ಕೆಲಕಾಲ ಗದ್ಗರಿತರಾದರು.

ಅತ್ಯಂತ ಸೌಮ್ಯ ಸ್ವಭಾವಿಯಾಗಿದ್ದ ಬಲರಾಮ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರವಲ್ಲದೆ, ಸಾರ್ವಜನಿಕರ ಗಮನವನ್ನು ಸೆಳೆದಿತ್ತು. 1999ರಿಂದ 2011ರವರೆಗೆ ಸತತ 14 ಬಾರಿ ಚಿನ್ನದ ಅಂಬಾರಿಯನ್ನು ನಿರಾಯಾಸವಾಗಿ ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಹೊತ್ತು, ಪ್ರೀತಿಗೆ ಪಾತ್ರವಾಗಿತ್ತು.

ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯ, ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ ಚಿಕ್ಕನರಗುಂದ, ಡಿ.ಸಿ.ಎಫ್. ಸೀಮಾಪಿ.ಎ, ಸೌರಭ್ ಕುಮಾರ್, ಶರಣ ಬಸಪ್ಪ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎಲ್ಲ ಸಹಾಯಕ ಅರಣ್ಯ ಸಂರಕ್ಷಣಾಕಾರಿಗಳು ಜೊತೆಗೆ ಬಲರಾಮ ಆನೆಯ ಮಾವುತ ತಿಮ್ಮ ಹಾಗೂ ಕುಟುಂಬಸ್ಥರು, ಕಾವಾಡಿ ಮಂಜುನಾಥ ಹಾಗೂ ಬಲರಾಮ ಆನೆಯನ್ನು ಹಲವುದಿನಗಳಿಂದ ಆರೈಕೆ ಮಾಡಿದ ಪಶುವೈದ್ಯರಾದ ಡಾ.ರಮೇಶ್, ಡಾ.ನಾಗರಾಜು ಹಾಗೂ ಡಾ.ಮುಜೀಬ್ ಮತ್ತಿತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು