NEWSಕ್ರೀಡೆದೇಶ-ವಿದೇಶ

ವಿಶ್ವ​​ಕಪ್​ ಫೈನಲ್ ಪಂದ್ಯ ಗೆಲ್ಲುವ ತಂಡಕ್ಕೆ ವಿಶ್ವಕಪ್​ ಕೊಡುವರೆ ಪ್ರಧಾನಿ ಮೋದಿ..!!??

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇದೇ ನವೆಂಬರ್‌ 19ರ ಭಾನುವಾರ ನಡೆಯಲಿರುವ ವಿಶ್ವ​​ಕಪ್​ ಫೈನಲ್ ಪಂದ್ಯದ ಬಗ್ಗೆ ವಿಶ್ವದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಕಪ್ ಗೆಲ್ಲುವ ಫೆವರಿಟ್ ಪಂದ್ಯ ಭಾರತವಾದರೂ ಈಗಾಗಲೇ ಹಲವು ಬಾರಿ ವಿಶ್ವಕಪ್​ ಗೆದ್ದು ದಾಖಲೆ ಬರೆದಿರುವ ಆಸಿಸ್​ ಮತ್ತೇ ಕಪ್​ಗೆ ಮುತ್ತಿಕ್ಕುವ ತವಕದಲ್ಲಿದೆ.

ಈಗಾಗಲೇ 2 ತಂಡಗಳು ನೆಟ್ಸ್​ನಲ್ಲಿ ಭರ್ಜರಿ ಅಭ್ಯಾಸದಲ್ಲಿ ತೊಡಗಿದ್ದು, ರಣಕಣದಲ್ಲಿ ಗೆಲ್ಲಲ್ಲು ಬೇಕಾದ ರಣತಂತ್ರಗಾರಿಕೆಗಳನ್ನು ಹೆಣೆಯುತ್ತಿವೆ. ಈ ಎಲ್ಲದರ ನಡುವೆ ಫೈನಲ್ ಮ್ಯಾಚ್ ಗೆಲ್ಲುವ ತಂಡಕ್ಕೆ ವಿಶ್ವಕಪ್​ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ಹಸ್ತಾಂತರ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ​ ವರ್ಲ್ಡ್​​ಕಪ್​ ಫೈನಲ್​ ಕದನ ಸದ್ಯ ವಿಶ್ವದ ಕೇಂದ್ರ ಬಿಂದುವಾಗಿದೆ. ಪ್ರತಿಷ್ಠೆಯ ಟೂರ್ನಿಯಲ್ಲಿ ಲೀಗ್​, ಸೆಮಿಫೈನಲ್​ ಪಂದ್ಯಗಳೆಲ್ಲ ಮುಗಿದಿದ್ದು ಭಾನುವಾರ ಕ್ರಿಕೆಟ್​ ವರ್ಲ್ಡ್​ಕಪ್​ನ ಫೈನಲ್​ ಪಂದ್ಯ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಸ್ವತಃ ವರ್ಲ್ಡ್​​ಕಪ್​ ಪ್ರದಾನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದು ವೈರಲ್ ಆಗುತ್ತಿದೆ.

ಕ್ಯಾಪ್ಟನ್ ರೋಹಿತ್ ಶರ್ಮಾ: ಫೈನಲ್​ ಪಂದ್ಯಕ್ಕಾಗಿ ಈಗಾಗಲೇ ಸ್ಟೇಡಿಯಂ ಸಿದ್ಧವಾಗಿದ್ದು ಭಾರತ-ಆಸ್ಟ್ರೇಲಿಯಾ​ ನಡುವಿನ ಪಂದ್ಯ ವೀಕ್ಷಕರಿಗೆ ರಸದೌತಣ ನೀಡಲಿದೆ. ಕ್ಯಾಪ್ಟನ್​ ರೋಹಿತ್ ಶರ್ಮಾ ನೇತೃತ್ವದ ತಂಡ ತವರಿನಲ್ಲಿ ನಡೆಯುವ ಮ್ಯಾಚ್ ಗೆಲ್ಲುವ ನಿರೀಕ್ಷೆಯಲ್ಲಿದೆ.

ಅದರಂತೆ ಪ್ಯಾಟ್ ಕಮಿನ್ಸ್ ಪಡೆ ಸೌತ್ ಆಫ್ರಿಕಾವನ್ನು ಮನೆಗೆ ಕಳುಹಿಸಿ ಮತ್ತೆ ಫೈನಲ್​​ಗೆ ಎಂಟ್ರಿ ಕೊಟಿದ್ದು, ಕಪ್ ಗೆದ್ದುಕೊಂಡು ಹೋಗುವ ಭರವಸೆಯಲ್ಲಿದೆ. ಅದೇನೆ ಆದರೂ ಭಾನುವಾರ ನಡೆಯುವ ಮ್ಯಾಚ್ ಹಲವು ನೆನಪುಗಳಿಗೆ ಸಾಕ್ಷಿಯಾಗಿ ಉಳಿಯಲಿದ್ದು ಎಲ್ಲರಿಗೂ ಅವಿಸ್ಮರಣೀಯವಾಗಿರಲಿದೆ.

ರೋಹಿತ್ ಸಾರಥ್ಯದ ತಂಡ ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯ ಗೆದ್ದು ಫೈನಲ್​​ಗೆ ಎಂಟ್ರಿ ಕೊಟ್ಟಿದೆ. ಅದರಂತೆ ಬಲಿಷ್ಠ ದಕ್ಷಿಣ ಆಫ್ರಿಕಾವನ್ನು ಹೊಡೆದುರುಳಿಸಿ ಆಸ್ಟ್ರೇಲಿಯಾ ತಂಡ ಫೈನಲ್​ಗೆ ಬಂದಿದೆ. ಹೀಗಾಗಿ ಫೈನಲ್ ಪಂದ್ಯ ಯಾವ ತಂಡ ಗೆಲ್ಲುತ್ತದೆ ಎಂಬ ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು