CrimeNEWSನಮ್ಮರಾಜ್ಯ

ವಾಹನಗಳ ದಂಡದ 50% ವಿನಾಯಿತಿಯ ಕಾಲಮಿತಿ ಮೂರು ತಿಂಗಳು ವಿಸ್ತರಿಸಿ: ಸಿಎಂಗೆ ಜಗದೀಶ್‌ ವಿ.ಸದಂ ಪತ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆಯ ದಂಡದ ಬಾಕಿ ಮೊತ್ತ ಪಾವತಿಯ ಶೇ. 50 ವಿನಾಯಿತಿಯ ಕಾಲಮಿತಿಯನ್ನು ಮೂರು ತಿಂಗಳು ವಿಸ್ತರಿಸಬೇಕೆಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ.ಸದಂ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದ ಸದಂ ಅವರು, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಶಿಫಾರಸಿನಂತೆ, ವಾಹನ ಸವಾರರು ಬಾಕಿ ಉಳಿಸಿಕೊಂಡಿರುವ ದಂಡವನ್ನು ಫೆಬ್ರವರಿ 11ರೊಳಗೆ ಪಾವತಿಸಿದಲ್ಲಿ ಶೇ. 50 ವಿನಾಯಿತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೀಗೆ ವಿನಾಯಿತಿ ನೀಡುವ ಮೂಲಕ ವಾಹನಸವಾರರಿಗೆ ನೆರವಾಗುವುದು ಸ್ವಾಗತಾರ್ಹ. ಆದರೆ ಅತ್ಯಲ್ಪ ಅವಧಿಯ ಕಾಲಮಿತಿ ನಿಗದಿಪಡಿಸುವ ಮೂಲ ಕೇವಲ ಶ್ರೀಮಂತ ವಾಹನ ಸವಾರರಿಗೆ ಮಾತ್ರ ನೆರವಾಗಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಕೇವಲ ಒಂದು ವಾರಗಳ ಸಮಯಾವಕಾಶ ನೀಡುವುದರಿಂದ ಬಡ ಮತ್ತು ಮಧ್ಯಮ ವರ್ಗದ ವಾಹನ ಸವಾರರಿಗೆ ಹಣ ಹೊಂದಿಸಲು ಕಷ್ಟವಾಗುತ್ತದೆ. ಅಲ್ಲದೇ, ಅನೇಕ ವಾಹನ ಸವಾರರು ತಮ್ಮ ಮಕ್ಕಳ ಶಾಲಾ ಶುಲ್ಕ ಪಾವತಿಸುವುದು ಸೇರಿದಂತೆ ನಾನಾ ರೀತಿಯ ಅಗತ್ಯ ಖರ್ಚುಗಳು ಈ ಸಮಯದಲ್ಲಿರುತ್ತದೆ. ವಿನಾಯಿತಿ ಯೋಜನೆಯನ್ನು ದಿಢೀರ್‌ ಘೋಷಿಸಿರುವುದರಿಂದ ಮೊದಲೇ ಹಣವನ್ನು ಕೂಡಿಟ್ಟುಕೊಳ್ಳಲೂ ವಾಹನ ಸವಾರರಿಗೆ ಅವಕಾಶ ಸಿಕ್ಕಿರುವುದಿಲ್ಲ.

ಆದ್ದರಿಂದ ಮುಖ್ಯಮಂತ್ರಿಯವರು ಈ ವಿನಾಯಿತಿ ಯೋಜನೆಯ ಕಾಲಮಿತಿಯನ್ನು ಮೂರು ತಿಂಗಳ ತನಕ ವಿಸ್ತರಿಸಬೇಕು. ಈ ಮೂಲಕ ಬಡ ಹಾಗೂ ಮಧ್ಯಮ ವರ್ಗದ ವಾಹನ ಸವಾರರಿಗೂ ವಿನಾಯಿತಿಯ ಲಾಭ ಸಿಗುವಂತೆ ಮಾಡಬೇಕು ಎಂದು ಜಗದೀಶ್‌ ವಿ. ಸದಂ ಆಗ್ರಹಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ