NEWSನಮ್ಮರಾಜ್ಯರಾಜಕೀಯ

ಶೇ.17ರಷ್ಟು ಮಧ್ಯಂತರ ವೇತನ ಹೆಚ್ಚಳಕ್ಕೆ ಓಕೆ ಎಂದ ಸರ್ಕಾರಿ ನೌಕರರು : ಮುಷ್ಕರ ಅಂತ್ಯ- ಡ್ಯೂಟಿಗೆ ಹಾಜರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಧ್ಯಂತರ ಪರಿಹಾರ ಭತ್ಯೆಯಾಗಿ ಸರ್ಕಾರ ಘೋಷಣೆ ಮಾಡಿರುವ ಶೇ.17ರಷ್ಟು ತಾತ್ಕಾಲಿಕ ಪರಿಹಾರವನ್ನು ಸರ್ಕಾರಿ ನೌಕರರು ಒಪ್ಪಿಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ ತಿಳಿಸಿದ್ದಾರೆ.

ಈಗ ಆದೇಶ ಹೊರಡಿಸಿರುವುದರಿಂದ ನಿವೃತ್ತ ನೌಕರರು ಸೇರಿದಂತೆ 15 ಲಕ್ಷ ನೌಕರರ ಕುಟುಂಬಕ್ಕೆ ಅನುಕೂಲವಾಗಿರುವುದರಿಂದ ತಾತ್ಕಾಲಿಕ ಪರಿಹಾರವನ್ನು ಒಪ್ಪಿಕೊಂಡು ನಾವು ಮುಷ್ಕರವನ್ನು ವಾಪಸ್‌ ಪಡೆದುಕೊಂಡಿದ್ದೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಕಳೆದ ರಾತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ವಿಫಲವಾಗಿತ್ತು. ಹೀಗಾಗಿ ಇಂದು (ಮಾ.1) ಮುಷ್ಕರ ಆರಂಭಗೊಳ್ಳುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಶೇ.17 ವೇತನ ಹೆಚ್ಚಿಸುವ ಬಗ್ಗೆ ತಕ್ಷಣ ಆದೇಶ ನೀಡಿದ್ದರು.

ಏ.1ರಿಂದ ಜಾರಿಗೆ ಬರುವಂತೆ ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಪರಿಷ್ಕರಣೆ ಮಾಡಿ ಆದೇಶವನ್ನೂ ಹೊರಡಿಸಿದ್ದು, ಇದಕ್ಕೆ ಒಪ್ಪಿರುವುದಾಗಿ ಅಧ್ಯಕ್ಷ ಷಡಕ್ಷರಿ ತಿಳಿಸಿದರು.

ಮುಷ್ಕರದ ಹಿನ್ನೆಲೆಯಲ್ಲಿ ಎಸ್ಎಸ್ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಮೈಸೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಥಮ ಪಿಯುಸಿ, ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಇನ್ನು ರಾಜ್ಯಾದ್ಯಂತ ಸರ್ಕಾರಿ ಕಚೇರಿಯ ಸೇವೆ ಬಹುತೇಕ ಸ್ಥಗಿತವಾಗಿತ್ತು. ಸಾರ್ವಜನಿಕರು ಇದರಿಂದ ತೊಂದರೆ ಅನುಭವಿಸುವಂತಾಗಿದೆ. ಆದರೆ ಈ ತಕ್ಷ ಎಲ್ಲ ಸರ್ಕಾರಿ ನೌಕರರು ಡ್ಯೂಟಿಗೆ ಹಾಜರಾಗುವಂತೆ ತಿಳಿಸಿದ್ದು, ಇನ್ನು ದೂರದ ಸ್ಥಳದಲ್ಲಿರುವ ನೌಕರರು ಇಂದು ಹಾಜರಾಗುವುದಕ್ಕೆ ಸಾಧ್ಯವಾಗುವುದಿಲ್ಲ ಅಂಥವರಿಗೆ ವಿನಾಯಿತಿ ನೀಡಬೇಕು ಎಂದು ಸಹ ಕೇಳಿಕೊಂಡರು ಷಡಕ್ಷರಿ.

ಎನ್‌ಪಿಎಸ್‌ ಸಂಬಂಧ ಸಮಿತಿ ರಚಿಸಿದ್ದು ಅದು ಮುಂದಿನ 2ತಿಂಗಳಲ್ಲಿ ವರದಿ ಕೊಡಬೇಕು ಆ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ಸದ್ಯ ಈಗ ಆದೇಶ ಮಾಡಿರುವ ಶೇ.17ರಷ್ಟು ವೇತನ ಹೆಚ್ಚಳವು ತಾತ್ಕಾಲಿಕವಾಗಿದ್ದು ನಮ್ಮ ಬೇಡಿಕೆಯಾದ ಶೇ.40ರಷ್ಟು ವೇತನ ಹೆಚ್ಚಳವನ್ನು 7ನೇ ವೇತನ ಆಯೋದಲ್ಲಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸುವುದು ಮುಂದುವರಿಯಲಿದೆ ಎಂದು ವಿವರಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು