NEWSನಮ್ಮಜಿಲ್ಲೆನಮ್ಮರಾಜ್ಯ

ಶಿವಮೊಗ್ಗದಲ್ಲಿ ಸಾರಿಗೆ ನೌಕರರ ಒಗ್ಗಟ್ಟು ಪ್ರದರ್ಶನ – ಸೈಕಲ್‌ ಜಾಥಾಕ್ಕೆ 36 ದಿನಗಳು

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ರಾಜ್ಯಾದ್ಯಂತ ಕಳೆದ ಅ.10ರಂದು ಬಳ್ಳಾರಿಯಲ್ಲಿ ಚಾಲನೆ ನೀಡಿರುವ ಬೃಹತ್‌ ಸೈಕಲ್‌ ಜಾಥಾವು ಇಂದಿಗೆ 36 ದಿನಗಳನ್ನು ಪೂರ್ಣಗೊಳಿಸಿದೆ. ಈ ದಿನ ಶಿವಮೊಗ್ಗದಲ್ಲಿ ಸಂಚರಿಸುತ್ತಿದ್ದು, ನೌಕರರು ಅತ್ಯಂತ ಉತ್ಸಾಹದಿಂದಲೇ ನೌಕರರು ಭಾಗವಸಿದ್ದರು.

ಇನ್ನು ಈ ವೇಳೆ ಜಿಲ್ಲಾಧಿಕಾರಿಗಳ ಮೂಲಕ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಸಲು ನೂರಾರು ನೌಕರರು ಸಂಗಮಗೊಂಡಿದ್ದು, ಸರ್ಕಾರದ ನಡೆಯನ್ನು ಖಂಡಿಸಿದರು. ಕೊಟ್ಟ ಮಾತು ಈಡೇರಿಸದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಾರಿಗೆ ಸಂಸ್ಥೆಯಲ್ಲಿ ಖಾಸಗೀಕರಣ ನೀತಿಯನ್ನು ಕೈ ಬಿಡಬೇಕು. ಕೂಟದ ನಡೆ ಕಾರ್ಮಿಕರ ಏಳಿಗೆಯ ಕಡೆ. ನಡೆಸಿ ನಡೆಸಿ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಿ ಎಂಬುವುದು ಸೇರಿದ ವಿವಿಧ ಸ್ಲೋಗನ್‌ಗಳಿರುವ ಬ್ಯಾನರ್‌ಗಳನ್ನು ಹಿಡಿದು ಕಾರ್ಮಿಕರು ಘೋಷಣೆಗಳನ್ನು ಕೂಗಿದರು.

ಚೌಕಾಸಿ ವೇತನ ಪರಿಷ್ಕರಣೆ ತೊಲಗಿಸಿ ಸಾರಿಗೆ ಕಾರ್ಮಿಕರನ್ನು ಉಳಿಸಿ, ಬೇಕೇಬೇಕು ವೇತನ ಆಯೋಗವೇ ಬೇಕು. ಅಗ್ರಿಮೆಂಟ್‌ ಬಾಳು ಕಾರ್ಮಿಕರ ಕುಟುಂಬ ಬೀದಿಪಾಲು. ನಾಲ್ಕು ವರ್ಷಕ್ಕೊಮ್ಮೆ ಸಾರಿಗೆ ಕಾರ್ಮಿಕರ ಬಲಿ ನಿಲ್ಲಲ್ಲಿ. ಮುಷ್ಕರದ ಸಮಯದಲ್ಲಿ ಆಗಿರುವಂತಹ ಸುಳ್ಳು ಪೊಲೀಸ್‌ ಕೇಸ್‌ ಹಿಂಪಡೆಯಬೇಕು ಎಂದು ಒತ್ತಾಯಿಸಿ ಇಂದು ನಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ನೂರಾರು ಸಾರಿಗೆ ನೌಕರರು ಸೈಕಲ್‌ ಜಾಥಾಕ್ಕೆ ಸಾಥ್‌ ನೀಡಿದರು.

ಜಿಲ್ಲಾಧಿಕಾರಿಗಳಿಗೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಯ ಮನವಿ ಪತ್ರ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಮುಟ್ಟಿಸಿ ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಿಸಿ ಎಂದು ಮನವಿ ಮಾಡಿದರು.

ಇನ್ನು ಈಗಾಗಲೇ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಂಚರಿಸಿರುವ ಸಾರಿಗೆ ನೌಕರರ ಸೈಕಲ್‌ ಜಾಥಾ ನಿರಂತರವಾಗಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸುತ್ತಿದೆ. 1400ಕ್ಕೂ ಹೆಚ್ಚು ಕಿಮೀ ಕ್ರಮಿಸಿರುವ ಸೈಕಲ್‌ ಜಾಥಾ ನಿರಂತರವಾಗಿ ತನ್ನ ಸಂಚಾರವನ್ನು ಮುಂದುವರಿಸಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ