NEWSದೇಶ-ವಿದೇಶನಮ್ಮರಾಜ್ಯ

ಶಶಿ ಸ್ಪರ್ಷಿಸಿ ವಿಕ್ರಮ ಸಾಧಿಸಿದ ಚಂದ್ರಯಾನ -3 : ವಿಶ್ವಕ್ಕೆ ಐತಿಹಾಸಿಕ ಸಂದೇಶ ರವಾನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೂರಾ ನಲವತ್ತು ಕೋಟಿ ಭಾರತೀಯರ ಶುಭ ಹಾರೈಕೆ ಹಾಗೂ ಪ್ರಾರ್ಥನೆಯ ಫಲವಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ನೌಕೆ ಬುಧವಾರ ಸಂಜೆ 6.03ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಐತಿಹಾಸಿಕ ಸಂದೇಶ ಸಾರಿತು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿದ್ದ ಈ ಅತ್ಯಂತ ಮಹತ್ವದ ಸಾಹಸಕ್ಕೆ ಇಡೀ ವಿಶ್ವವೇ ಬೆರಗು ಗಣ್ಣಿನಿಂದ ನೋಡುತ್ತಿತ್ತು. ಈ ಅದ್ಭುತವನ್ನು ಸಾಧಿಸುವ ಮೂಲಕ ಬಾಹ್ಯಾಕಾಶದಲ್ಲಿ ಸಾಧನೆ ಮಾಡಿದ ಇತರ ರಾಷ್ಟ್ರಗಳಲ್ಲಿ ಭಾರತವೂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದು, ವಿಶ್ವದಲ್ಲೇ ಇತರ ದೇಶಗಳು ಮಾಡದ ಸಾಧನೆಯನ್ನು ಮಾಡಿದ್ದು, ಭಾರತೀಯರಿಗೆ ಹೆಮ್ಮೆಯ ವಿಷಯವಾಗಿದೆ.

ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಸದ್ಯ ಹೊರಹೊಮ್ಮಿದ್ದು, ಈ ಕ್ಷಣವನ್ನು ಕಣ್ತುಂಬಿಕೊಂಡ ದೇಶದ ಪ್ರದಾನಿ ನರೇಂದರ ಮೋದಿ ಅವರು ಇಸ್ರೋ ಸಾಧನೆಯನ್ನು ಹಾಕಿ ಹೊಗಳಿದರು.

ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ ಮಾನವನ ಜಾಣ್ಮೆ ಮತ್ತು ನಿರ್ಣಯಕ್ಕೆ ಸಾಕ್ಷಿಯಾಗಿದೆ. ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ ಒಳಗೊಂಡಿರುವ ಐಒ, ಚಂದ್ರನ ಭೂಪ್ರದೇಶದಲ್ಲಿ ಅತ್ಯಂತ ಸುರಕ್ಷಿತವಾಗಿ ಹಗುರವಾಗಿ ಶಶಿಯ ನೆಲವನ್ನು ಸ್ಪರ್ಶಿಸುವ ಮೂಲಕ ಇತಿಹಾಸ ನಿರ್ಮಿಸಿತು.

ವಿಕ್ರಂ ಸುರಕ್ಷಿತವಾಗಿ ಚಂದಮಾಮನ ಅಂಗಳವನ್ನು ತಲುಪಿ ವಿಶ್ವದಲ್ಲಿ ವಿಕ್ರಮ ಸ್ಥಾಪಿಸಿದ ಗರಿಮೆಯನ್ನು ಇಸ್ರೋ ಪಾಲಿಗೆ ಒದಗಿ ಕೊಟ್ಟಿದೆ. ಚಂದ್ರಯಾನ-3 ರ ಲ್ಯಾಂಡಿಂಗ್ ಭಾರತಕ್ಕೆ ಐತಿಹಾಸಿಕ ಮೈಲಿಗಲ್ಲಾಗಿದೆ. ಏಕೆಂದರೆ ಇದು ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್‌ನ ಸಂಕೀರ್ಣ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡ ನಾಲ್ಕನೇ ರಾಷ್ಟ್ರವಾಗಿ ಗುರುತಿಸಿಕೊಂಡಿದೆ.

ಅಮೆರಿಕ, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟಗಳ ಸಾಧನೆಯ ಶ್ರೇಣಿಗೆ ಈ ಮೂಲಕ ಸೇರಿದ ಗರಿಮೆ ಭಾರತತ್ತದಾಗಿದೆ. ಅಲ್ಲದೆ ಭಾರತ ಬಾಹ್ಯಾಕಾಶ ಪರಿಶೋಧನೆಯಲ್ಲಿ ವಿಕ್ರಮ ಸಾಧಿಸಿದ ಶ್ರೇಷ್ಠತೆ ಪಡೆದುಕೊಂಡಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು