NEWSಸಂಸ್ಕೃತಿ

ಷಬ್‌-ಎ-ಬರಾತ್‌ : ಸಾಮೂಹಿಕ ಪ್ರಾರ್ಥನೆ, ಖಬರ್‌ಸ್ತಾನ್‌ಗಳಿಗೆ ಭೇಟಿ ನಿಷೇಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್‌ 9 ರಂದು ಮುಸ್ಲಿಂ ಸಮುದಾಯದ ಪವಿತ್ರ ರಾತ್ರಿ ಎಂದು ಆಚರಿಸಲಾಗುವ ಷಬ್‌-ಎ-ಬರಾತ್‌ ದಿನ ಸಾಮೂಹಿಕ ಪ್ರಾರ್ಥನೆ, ಖಬರ್‌ಸ್ತಾನ್‌ಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಔಕಾಫ್‌ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಸ್ಲಾಹುದ್ದೀನ್‌ ಜೆ ಗದ್ಯಾಲ್‌ ತಿಳಿಸಿದ್ದಾರೆ.

ಇಸ್ಲಾಮಿಕ್‌ ಕ್ಯಾಲೆಂಡರ್‌ ಪ್ರಕಾರ ಷಬ್‌-ಎ ಬರಾತ್‌ ಅನ್ನು ಒಂದು ಪವಿತ್ರ ರಾತ್ರಿ ಎಂದು ಆಚರಿಸಲಾಗುತ್ತದೆ. ಜಗತ್ತಿನ ಎಲ್ಲ ಭಾಗದ ಮುಸ್ಲಿಮರು ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸುವ ಈ ಸಂದರ್ಭದಲ್ಲಿ ಇಡೀ ರಾತ್ರಿ ಮಸೀದಿಗಳಲ್ಲಿ ಸಾಮೂಹಿಕವಾಗಿ ಸೇರಿ ಪ್ರಾರ್ಥಿಸಲಾಗುತ್ತದೆ.

ಈ ವರ್ಷ  ಷಬ್‌ ಎ ಬರಾತ್‌ ಏಪ್ರಿಲ್‌ 9, 2020ರಂದು ಬಂದಿದೆ. ಆದರೆ ಕೋವಿಡ್‌ 19 ವ್ಯಾಪಕವಾಗಿ ವ್ಯಾಪಿಸುತ್ತಿರುವುದರಿಂದ ಕರ್ನಾಟಕ ಸರ್ಕಾರವು ನೀಡಿರುವ ವಿವಿಧ ಆದೇಶಗಳಾನುಸಾರ ಸಾಮೂಹಿಕ ಪ್ರಾರ್ಥನೆಗಳನ್ನು ಅಮಾನತುಮಾಡಲಾಗಿ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇಮಾರತ್‌-ಎ-ಶರಿಯಾ ಈ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿದ್ದು, ಎಲ್ಲಾ ಮುಸಲ್ಮಾನರು ಷಬ್‌ ಎ ಬರತ್‌ ದಿನ ಇವುಗಳನ್ನು ಅನುಸರಿಸಲು ತಿಳಿಸಲಾಗಿದೆ.

ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲೂ ಧಾರ್ಮಿಕ ಆಚರಣೆಗಳನ್ನು ಖಬರಸ್ತಾನ್‌/ದರ್ಗಾಗಳಿಗೆ ಅವಕಾಶ ಮಾಡಿಕೊಡಬಾರದು ಮತ್ತು ಖಬರಸ್ತಾನ್‌/ದರ್ಗಾಗಳ ಪ್ರವೇಶ ದ್ವಾರಗಳ ಮುಚ್ಚಿರಬೇಕು ಎಂದು ಸೂಚಿಸಿದ್ದಾರೆ.

ಖಬರಸ್ತಾನ/ದರ್ಗಾಗಳ ಆಡಳಿತ ಮಂಡಳಿಗಳು ಸಾರ್ವಜನಿಕ ಆರೋಗ್ಯದ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಈ ಆದೇಶವನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ನಿರ್ದೇಶಿಸಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ