NEWSಆರೋಗ್ಯನಮ್ಮಜಿಲ್ಲೆ

ಸಾಂಕ್ರಾಮಿಕ ರೋಗಗಳ ತಡೆಗೆ ಮುಂದಾದ ಜಲಮಂಡಲಿ

ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ತಕ್ಷಣ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ  ಬೆಂಗಳೂರು ಜಲಮಂಡಳಿ ವತಿಯಿಂದ ತೀವ್ರ ನಿಗವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿಯು ನೀರು ಸರಬರಾಜು ಕೊಳವೆಯಲ್ಲಿ ಸೋರುವಿಕೆಯನ್ನು  ಸಾರ್ವಜನಿಕರಿಂದ ಅಥವಾ ಮಂಡಳಿಯ ಸಿಬ್ಬಂದಿ  ಗುರುತಿಸಿದ ತಕ್ಷಣ ಸೋರುವಿಕೆ ತಡೆಗಟ್ಟಲು ಕ್ರಮವಹಿದೆ. ಇದಲ್ಲದೆ ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ತಕ್ಷಣ ಕ್ರಮವಹಿಸಿ ಕಲುಷಿತ ನೀರು ಸರಬರಾಜು ಕೊಳವೆಗೆ ಸೇರದಂತೆ ಕೂಡಲೇ ಕಾರ್ಯ ಪ್ರವೃತವಾಗುತ್ತಿದೆ ಎಂದು ಹೇಳಿದ್ದಾರೆ.

ಕಾಲರಾ ಮತ್ತು ಜಿ.ಇ. ಗೆ ಸಂಬಂಧಿಸಿದ ಮಾಹಿತಿಯನ್ನು ಸಾಂಕ್ರಾಮಿಕ ರೋಗಗಳ ಆಸ್ಪತ್ರೆ(Health & Family WelfareDepartment, Government Epidemic Disease Hospital, Bangalore) ಯಿಂದ ಮಾ.18, 19 ರಂದು ನೋಂದಣಿಯಾದ ಪ್ರಕರಣಗಳ ವಿಳಾಸವನ್ನು ಪಡೆದು  ಅಂತಹ ಸ್ಥಳಗಳಿಂದ ನೀರಿನ ಮಾದರಿಯನ್ನು ಸಂಗ್ರಹಿ, ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾ.18, 19 ರವರೆಗೆ ದಾಖಲುಗೊಂಡ ಒಟ್ಟು 10 ಪ್ರಕರಣಗಳಲ್ಲಿ 4 ಪ್ರಕರಣಗಳಿಗೆ ಸಂಬಂಧಿಸಿದ ಪ್ರದೇಶಗಳಲ್ಲಿ ಅಂದು ನೀರು ಸರಬರಾಜು ಇಲ್ಲದ ಕಾರಣ ನೀರಿನ ಮಾದರಿಯನ್ನು ಸಂಗ್ರಹಿಸಿಲ್ಲ.  2 ಪ್ರಕರಣಗಳಿಗೆ ಸಂಬಂಧಿಸಿದ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ನೀಡಲಾಗಿದ್ದು, ಫಲಿತಾಂಶ ನಿರೀಕ್ಷಣೆಯಲ್ಲಿದೆ.  ಉಳಿದ 4 ಪ್ರಕರಣಗಳು ಜಲ ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿ ಎಂದು ಸ್ಪಷ್ಟಪಡಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ