NEWSದೇಶ-ವಿದೇಶರಾಜಕೀಯ

ಸತ್ಯೇಂದ್ರ ಜೈನ್‍ಗೆ ಜೈಲಿನಲ್ಲಿ ಫಿಸಿಯೋಥೆರಪಿ ಮಾಡಲಾಗುತ್ತಿತ್ತೇ ಹೊರತು ಮಸಾಜ್ ಅಲ್ಲ : ಬಿಜೆಪಿಗೆ ಸಿಎಂ ಕೇಜ್ರಿವಾಲ್ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಎಎಪಿಯ ಸಚಿವ ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ಫಿಸಿಯೋಥೆರಪಿ ಮಾಡಲಾಗುತ್ತಿತ್ತೇ ಹೊರತು ಮಸಾಜ್ ಅಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಇತ್ತೀಚೆಗಷ್ಟೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ (AAP) ಸಚಿವ ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ವಿಐಪಿ ಟ್ರೀಟ್‍ಮೆಂಟ್ ನೀಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದು ಸತ್ಯ ಇರಬಹುದು ಎಂದು ಮಾಧ್ಯಮಗಳಲ್ಲೂ ಸುದ್ದಿ ಅತೀ ವೇಗವಾಗಿ ಪ್ರಸಾವಾಗಿತ್ತು. ಆದರೆ ಆ ಎಲ್ಲವನ್ನು ತಳ್ಳಿಹಾಕಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿಯವರಿಗೆ ಇಂಥ ಕೆಲಸ ಮಾಡುವುದು ಬಿಟ್ಟು ಬೇರೆ ಇನ್ನೇನಿದೆ ಎಂದು ಕಿಡಿಕಾರಿದ್ದಾರೆ.

ವಡೋದ್ರಾದಲ್ಲಿ (Vadodra) ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್ ಅವರು, ಬಿಜೆಪಿ ಅವರು ಸತ್ಯೇಂದ್ರ ಜೈನ್ ಅವರಿಗೆ ಜೈಲಿನಲ್ಲಿ ಮಸಾಜ್ ಮತ್ತು ವಿಐಪಿ ಟ್ರೀಟ್‍ಮೆಂಟ್ ನೀಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಮಸಾಜ್ ಅಲ್ಲ ಕೇವಲ ಫಿಸಿಯೋಥೆರಪಿ ಅದನ್ನು ತಿಳಿಯದೆ ಈ ರೀತಿ ಜನರ ದಿಕ್ಕು ತಪ್ಪಿಸುವ ಕಡೆ ಹೋಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಗುಜರಾತ್‍ನಲ್ಲಿ (Gujrat) ವಿಐಪಿ ಟ್ರೀಟ್‍ಮೆಂಟ್ ಪಡೆದವರು ಗೃಹ ಸಚಿವ ಅಮಿತ್ ಶಾ ಎಂದು ಆರೋಪಿಸಿದ ಅವರು, ಅಮಿತ್ ಶಾ ಅವರು ಗುಜರಾತ್‍ನಲ್ಲಿ ಸಚಿವರಾಗಿದ್ದಾಗ ಜೈಲಿನಲ್ಲಿ ವಿಐಪಿ ಟ್ರೀಟ್‍ಮೆಂಟ್ ಪಡೆದರು, ಆದರೆ ಸತ್ಯೇಂದ್ರ ಜೈನ್‍ಗೆ ಅಂತಹದ್ದೇನೂ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಶನಿವಾರ ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ವ್ಯಕ್ತಿಯೊಬ್ಬರು ಮಸಾಜ್ ಮಾಡುತ್ತಿರುವ ಸೆ.13- 2022ರ ಹಳೆಯ ವಿಡಿಯೊವನ್ನುಬಿಜೆಪಿ ಬಿಡುಗಡೆ ಮಾಡಿತ್ತು. ಜೈನ್‍ಗೆ ವಿಐಪಿ ಸೌಕರ್ಯ ನೀಡಿರುವ ಆರೋಪದ ಮೇಲೆ ಕೆಲ ದಿನಗಳ ಹಿಂದೆ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ