CrimeNEWSನಮ್ಮಜಿಲ್ಲೆ

ಸಿಬ್ಬಂದಿ ಹಾಜರಾತಿ ಮಾಹಿತಿ ನೀಡಲು ನಿರಾಕರಿಸಿದ ಪಿಡಿಒಗೆ 15 ಸಾವಿರ ರೂ. ದಂಡ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಗ್ರಾಮ ಪಂಚಾಯಿತಿ ಸಿಬ್ಬಂದಿಯ ಹಾಜರಾತಿ ಪುಸ್ತಕದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರಿಗೆ ಹದಿನೈದು ಸಾವಿರ ರುಪಾಯಿ ದಂಡ ವಿಧಿಸಿ ಕರ್ನಾಟಕ ಮಾಹಿತಿ ಆಯೋಗ ಮೂರು ಕಂತುಗಳಲ್ಲಿ ಪಾವತಿಸುವಂತೆ ಆದೇಶ ಹೊರಡಿಸಿದೆ.

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿನ ಸಿಬ್ಬಂದಿಗಳ ಹಾಜರಾತಿಗೆ ಸಂಬಂಧಿಸಿದಂತೆ ಆರ್‌ಟಿಐ ಅಡಿ ಮಾಹಿತಿ ಕೇಳಲಾಗಿತ್ತು. ಆದರೆ, ಈ ಮಾಹಿತಿಯನ್ನು ನೀಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಂತ ಕುಮಾರ್ ನಿರಾಕರಿಸಿದ್ದರು.

ಅಧಿಕಾರಿಯ ಈ ನಿಲುವು ಪ್ರಶ್ನಿಸಿ ಅರ್ಜಿದಾರರು ಕರ್ನಾಟಕ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಮಾಹಿತಿ ಆಯೋಗವು ಹನುಮಂತ ಕುಮಾರ್‌ಗೆ 15 ಸಾವಿರ ರುಪಾಯಿ ದಂಡ ವಿಧಿಸಿದೆ.

ಆಯುಕ್ತ ಎಸ್‌.ಎಲ್. ಪಾಟೀಲ್ ಅವರು ಪ್ರತಿವಾದಿಗೆ ಮಾಹಿತಿ ನೀಡದ ಕಾರಣಕ್ಕೆ ದಂಡ ವಿಧಿಸಿದ್ದಾರೆ. ಈ ದಂಡದ ಮೊತ್ತವನ್ನು ಅವರ ವೇತನದಿಂದ ಪ್ರತಿ ತಿಂಗಳು 5 ಸಾವಿರ ರೂ ನಂತೆ ಕಡಿತಗೊಳಿಸಲು ಆದೇಶಿಸಿದ್ದಾರೆ.

ಹಾಗೆಯೇ ಅರ್ಜಿದಾರರಿಗೆ ಈ ಮಾಹಿತಿ ಒದಗಿಸುವಂತೆಯೂ ಆದೇಶಿಸಿ ಆಯೋಗ ಮೆಲ್ಮನವಿಯನ್ನು ವಿಲೇವಾರಿ ಮಾಡಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ