Breaking NewsNEWSದೇಶ-ವಿದೇಶ

ಸರ್ಕಾರ ಟೀಕಿಸಿದ ಮಾತ್ರಕ್ಕೆ ಮಾಧ್ಯಮಗಳ ನಿಯಂತ್ರಿಸಲು ಸಾಧ್ಯವಿಲ್ಲ : ಕೇಂದ್ರಕ್ಕೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸರ್ಕಾರವನ್ನು ಟೀಕಿಸಿದ ಮಾತ್ರಕ್ಕೆ ಮಾಧ್ಯಮವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು  ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು, ಮಲಯಾಳಂ ಸುದ್ದಿ ವಾಹಿನಿಯ ಮೇಲೆ  ಕೇಂದ್ರ ನಿರ್ಬಂಧಿಸಿದ್ದನ್ನು ತೆಗೆದುಹಾಕಿದೆ.

ಸರ್ಕಾರದ ನೀತಿ, ಕಾರ್ಯಗಳ ವಿಚಾರವಾಗಿ ಮೀಡಿಯಾ ಒನ್‌ ಸುದ್ದಿ ವಾಹಿನಿ ಮಾಡಿರುವ ಟೀಕೆಗಳನ್ನು ರಾಷ್ಟ್ರವಿರೋಧಿ ಎಂದು ಅರ್ಥೈಸಲಾಗುವುದಿಲ್ಲ. ಉತ್ತಮ ಪ್ರಜಾಪ್ರಭುತ್ವಕ್ಕೆ ಸ್ವತಂತ್ರ ಪತ್ರಿಕಾ ವ್ಯವಸ್ಥೆ ಅಗತ್ಯ ಎಂದು ನ್ಯಾಯಾಲಯ ತಿಳಿಸಿದೆ.

ಭದ್ರತಾ ಅನುಮತಿಯ ಕೊರತೆಯಿಂದಾಗಿ ಚಾನೆಲ್‌ನ ಪ್ರಸಾರ ಪರವಾನಗಿಯನ್ನು ನವೀಕರಿಸಲು ನಿರಾಕರಿಸಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ರಾಷ್ಟ್ರೀಯ ಭದ್ರತಾ ಹಕ್ಕುಗಳನ್ನು ಗಾಳಿಗೆ ತೂರಿದ್ದಕ್ಕಾಗಿ ಗೃಹ ಸಚಿವಾಲಯವನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ.

2020 ರಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗಳು ಮತ್ತು ಗಲಭೆಗಳ ಬಗ್ಗೆ ವ್ಯಾಪಕವಾಗಿ ವರದಿ ಮಾಡಿದ ಕೆಲವೇ ಚಾನೆಲ್‌ಗಳಲ್ಲಿ ಒಂದಾಗಿರುವ ಮೀಡಿಯಾ ಒನ್‌ನಲ್ಲಿ ಪ್ರಸಾರಕ್ಕೆ ನಿಷೇಧ ಹೇರುವ ನಿರ್ಧಾರವನ್ನು ಸಮರ್ಥಿಸಲು ಯಾವುದೇ ಪುರಾವೆಗಳಿಲ್ಲ.

ಅಲ್ಲದೆ, ಸಮರ್ಪಕ ಸಾಕ್ಷ್ಯ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಭಯೋತ್ಪಾದಕರ ಸಂಪರ್ಕದಲ್ಲಿದ್ದಾರೆ ಎನ್ನುವುದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ಎಂದು ಪ್ರತಿಪಾದಿಸುವುದು ಸರಿಯಲ್ಲ ಎಂದು ಕೋರ್ಟ್‌ ತಿಳಿಸಿದೆ.

ದೆಹಲಿಯಲ್ಲಿ ನಡೆದಿದ್ದ ಸಂಘರ್ಷದ ಬಗ್ಗೆ ಕೋಮು ಸಾಮರಸ್ಯ ಕೆಡಿಸುವ ವರದಿ ಮಾಡಲಾಗಿದೆ ಎಂದು ಆರೋಪಿಸಿ ಮಲಯಾಳಂ ಸುದ್ದಿ ವಾಹಿನಿಗೆ ಕೇಂದ್ರ ಸರ್ಕಾರ ನಿರ್ಬಂಧವನ್ನು ವಿಧಿಸಿತ್ತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ