NEWSನಮ್ಮರಾಜ್ಯ

ಸರ್ಕಾರಿ ನೌಕರರ ಮಾರ್ಚ್‌ ಮಾಸದ ವೇತನದಲ್ಲಿ ಕಡಿತವಿಲ್ಲ?

ಅಧಿಕಾರಿಗಳ ಸಂಬಳದಲ್ಲೂ ಯಾವುದೇ ತಡೆಯಿಲ್ಲ ಎಂದು ಹೇಳಲಾಗಿದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವೈರಸ್‌ ಸಮಸ್ಯೆಯಿಂದ ಉಂಟಾಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಿಕೊಳ್ಳಲು ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ವೇತನದಲ್ಲಿ ಯಾವುದೇ ಕಡಿತಗೊಳಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಹಲವು ರಾಜ್ಯಗಳ ಸರ್ಕಾರಗಳು ಈಗಾಗಲೇ ತಮ್ಮ ನೌಕರರು ಹಾಗೂ ಅಧಿಕಾರಿಗಳ ಸಂಬಳ ಕಟ್ ಮಾಡಿ ಆದೇಶ ಹೊರಡಿಸಿವೆ. ಆದರೂ ರಾಜ್ಯ ಸರ್ಕಾರ ಅಂತಹ ಚಿಂತನೆ ಮಾಡಿಲ್ಲ ಎಂದು ಹೇಳಲಾಗಿದೆ.

ಲಾಕ್‌ಡೌನ್‌ ವಿಸ್ತರಣೆ ಆಗದೇ ನಿಗದಿತ ದಿನದಂದೇ ಕೊನೆಗೊಂಡರೇ ಏನೂ ತೊಂದರೆ ಇಲ್ಲ. ವಿಸ್ತರಣೆ ಆದಲ್ಲಿ ಸಂಬಳ ಕಡಿತದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ ಎಂಬ ಆಲೋಚನಯಲ್ಲೂ ಮುಳುಗಿದೆ ಎನ್ನಲಾಗಿದೆ. ಆದರೆ, ಮುಂದಿನ ಪರಿಸ್ಥಿತಿಯನ್ನು ಅರಿತು ಎಚ್ಚರಿಕೆ ಹೆಜ್ಜೆ ಹಾಕಲು ತೀರ್ಮಾನಿಸಿದೆ.

ಏನೆ ಆದರೂ ಸದ್ಯದ ಈ ಮಟ್ಟಿಗಂತು ನೌಕರರ ಜೇಬಿಗೆ ಕತ್ತರಿ ಹಾಕುವಂತಹ ಯಾವುದೇ ಪ್ರಸ್ತಾಪ ಇಲ್ಲ ಎಂದು ಹಣಕಾಸು ಇಲಾಖೆ ಮೂಲಗಳು ಸ್ಪಷ್ಟಪಡಿಸಿವೆ ಎಂದು ಹೇಳಲಾಗಿದೆ.

ಈಗಾಗಲೇ ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಾಸ್ಥಾನಗಳಲ್ಲಿ ಕೊರೋನಾ ತಂದಿರುವ ಆರ್ಥಿಕ ಸಂಕಷ್ಟದಿಂದ ಪಾರಾಗಲು ತಮ್ಮ ನೌಕರರು ಮತ್ತು ಅಧಿಕಾರಿಗಳ ಜೇಬಿಗೆ ಭಾರಿ ಕೈಯನ್ನೇ ಹಾಕಿವೆ. ಮುಖ್ಯಮಂತ್ರಿಯಾದಿಯಾಗಿ ಎಲ್ಲ ಜನ ಪ್ರತಿನಿಧಿಗಳು ಆಡಳಿತ ಸೇವೆಯ ವಿವಿಧ ಇಲಾಖೆಯ ಅಧಿಕಾರಿಗಳು, ಎ,ಬಿ,ಸಿ ದರ್ಜೆ ನೌಕರರ ವೇತನವನ್ನು ಕಡಿತಗೊಳಿಸಿ ಆದೇಶ ಜಾರಿ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಅಂಥ ಯಾವುದೇ ಸ್ಥಿತಿ ಬಂದಿಲ್ಲ ಎಂದು ಹೇಳಲಾಗುತ್ತಿದೆ.

 

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು