NEWSನಮ್ಮರಾಜ್ಯ

ಸಾರಿಗೆ ನೌಕರರು: ಅಗ್ರಿಮೆಂಟ್ ಬೇಕು ಎನ್ನುವ ಮಹಾಶಯರೇ – ಅನುಭವಿಸಿದ ಕಷ್ಟವನ್ನು ಒಮ್ಮೆ ಹಿಂತಿರುಗಿ ನೋಡಿ

ಇದು ಒಂದು ಸಾಂದರ್ಭಿಕ ಚಿತ್ರ ಅಷ್ಟೆ ಬೇರೇನು ಅಲ್ಲ. ಆದರೆ ಈ ಚಿತ್ರ ಎಲ್ಲವನ್ನು ಹೇಳುತ್ತಿದೆ ಗಮನಿಸಿ..
ವಿಜಯಪಥ ಸಮಗ್ರ ಸುದ್ದಿ

ಕಳೆದ 2-3 ದಶಕಗಳಿಂದ ನೌಕರರು ಮತ್ತು ಅಧಿಕಾರಿಗಳ ನಡುವೆ ಕಂದಕ ಸೃಷ್ಟಿಸಿ ಸಾರಿಗೆ ನಿಗಮಗಳಲ್ಲಿ ಕೆಲ ಸಂಘಟನೆಗಳು ತಮ್ಮ ಅಸ್ತಿತ್ವ ಕಾಯ್ದುಕೊಳ್ಳುತ್ತಿವೆ. ಆ ಸಂಘಟನೆಗಳು ಈಗಲು ನೌಕರರು ಮತ್ತು ಅಧಿಕಾರಿಗಳ ನಡುವೆ ಇನ್ನಷ್ಟು ಕಂದಕ ಸೇಷ್ಟಿಸುತ್ತಿದ್ದು ತಮ್ಮ ಹಾವು ಮುಂಗೂಸಿಯಂತೆ ಮಾಡಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿವೆ.

ಇಂಥ ಸಂಘಟನೆಗಳ ಪರ ನಿಂತು ಈಗಲೂ ಕೆಲ ನೌಕರರು ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುವಂತಹ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾಗುತ್ತಿದ್ದಾರೆ. ಇಲ್ಲಿ ಎಲ್ಲ ಅಧಿಕಾರಿಗಳು ಭ್ರಷ್ಟರಲ್ಲ ಹಾಗೆಯೇ ಎಲ್ಲ ನೌಕರರು ಕೆಟ್ಟವರಲ್ಲ ಎಂಬುದನ್ನು ಅರಿತು ಸಂಸ್ಥೆಯನ್ನು ಮೇಲೆತ್ತುವ ಜತೆಗೆ ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳುವತ್ತ ಹೊರಳಬೇಕಿದೆ.

ಇನ್ನು ಹಿಂದಿನಿಂದಲೂ ಅಗ್ರಿಮೆಂಟ್  ಎಂಬ ಭೂತದ ಬಾಯಿಗೆ ಸಿಲುಕಿ ಪ್ರತಿ 4 ವರ್ಷಕೊಮ್ಮೆ ಅನುಭವಿಸಿರುವ ಕಷ್ಟ ಸಾಕು, ನಮಗೆ ಒಂದು ಶಾಶ್ವತ ಪರಿಹಾರ ಬೇಕು ಎಂಬ ಮಹದಾಸೆಯೊಂದಿಗೆ ನೌಕರರು  ತಮ್ಮ ಮನದಾಳವನ್ನು ಹಂಚಿಕೊಂಡಿದ್ದಾರೆ.

ನೌಕರರೇ ಬರೆದಿರುವ ಯಥಾ ವರದಿ ಇಲ್ಲಿದೆ….:  ನಮ್ಮಲ್ಲಿಯ ಅಗ್ರಿಮೆಂಟ್ ಹೇಗೆಂದರೆ ಪ್ರತಿ ವರ್ಷ ನಡೆಯುವ ಊರಿನ ಜಾತ್ರೆಯ ತೇರು / ರಥೋತ್ಸವ ಇದ್ದ ಹಾಗೆ.

ಈ ತೇರು ತನ್ನಷ್ಟಕ್ಕೆ ಹೊಗುವುದಿಲ್ಲ. ಅದಕ್ಕೆ ಎಲ್ಲರೂ ಸೇರಿ ಹಗ್ಗಕಟ್ಟಿ ಎಳೆದರೆ ಮಾತ್ರ ಚಲಿಸುವುದು.

ನಮ್ಮ ಅಗ್ರಿಮೆಂಟ್ ಕೂಡಾ ಜಾತ್ರೆಯ ತೇರು ಇದ್ದ ಹಾಗೇನೆ. ಯಾಕೆಂದರೆ ಈ ಹಿಂದಿನ ಪ್ರತಿ ಅಗ್ರಿಮೆಂಟ್‌ಅನ್ನು ಒಮ್ಮೆ ಹಿಂತಿರುಗಿ ನೋಡಿ.

ಪ್ರತಿ ಅಗ್ರಿಮೆಂಟ್ ತೆಗೆದುಕೊಳ್ಳುವಾಗಲೂ ಸಣ್ಣ ಪ್ರಮಾಣದ ಮುಷ್ಕರ (ಸಿಬ್ಬಂದಿಗಳ ವರ್ಗಾವಣೆ, ಡಿಸ್ಮಿಸ್, ಅಮಾನತು) ಮಾಡಲೇಬೇಕು. ನ್ಯಾಯಬದ್ದವಾಗಿ ಒಮ್ಮೆಯಾದರೂ ಸರಿಯಾಗಿ ನಾಲ್ಕು ವರ್ಷಕ್ಕೊಮ್ಮೆ ಪ್ರತಿ ಜನವರಿ ತಿಂಗಳ ಒಂದನೇ ತಾರಿಖಿನಂದು ಕೊಟ್ಟಿದ್ದಾರಾ? ಅದನ್ನು ಕೂಡ ಹೋರಾಟ ಮಾಡಿಯೇ ತೆಗೆದುಕೊಳ್ಳಬೇಕು ಮತ್ತು ಸಿಬ್ಬಂದಿಗಳು ವರ್ಗಾವಣೆ, ಸಸ್ಪೆಂಡ್, ವಜಾ ಪ್ರಕರಣಗಳನ್ನು ಅನುಭವಿಸಲೇಬೇಕು.

ಹೋರಾಟ ಮಾಡುವುದೇ ನಿಜ ಅಂದಮೇಲೆ ಯಾಕಾಗಿ ಸಣ್ಣ ಮತ್ತು ಉಪಯೋಗವಿಲ್ಲದ ಹೋರಾಟ ಮಾಡಬೇಕು?

ಅದು ಅಲ್ಲದೇ ಅಷ್ಟು ಶಿಸ್ತು ಪ್ರಕರಣ ಅನುಭವಿಸಿಯೂ ನಮ್ಮಗಳ ಅಗ್ರಿಮೆಂಟ್ ಯಾವ ತರಹ ಗೊತ್ತಾ?

ಒಂದು ಸತ್ತ ಎಮ್ಮೆಯನ್ನು ತಿನ್ನಲು ಹೇಗೆ ಕಿತ್ತಾಡಿ ಜಗಳ ಮಾಡಿಕೊಂಡು ಹಂಚಿಕೊಂಡು ತಿನ್ನುತ್ತಾರೋ ಹಾಗೆ ನಮ್ಮ ಪ್ರತಿ ನಾಲ್ಕು ವರ್ಷದ ಅಗ್ರಿಮೆಂಟ್.

ಇಷ್ಟಾದರೂ ಪ್ರಸ್ತುತ ಪ್ರತಿ ತಿಂಗಳು ಕನಿಷ್ಠ ಎರಡು ಸಿಬ್ಬಂದಿಗಳು ಆದರೂ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಇದರ ಬಗ್ಗೆ ಯಾಕಾಗಿ ಧ್ವನಿ ಎತ್ತುವುದಿಲ್ಲಾ ಗೋಸುಂಬೆಗಳಾ?

ಸತ್ತವರು ಸತ್ತರು, ನಮಗೆ ಸಿಗಬೇಕಾಗಿದ್ದು ಸಿಕ್ಕಿತು ಎಂಬ ಮನೋಧೋರಣೆಯಾ ಹೆತ್ಲಾಂಡಿಗಳಾ?

ಮೂಲವ್ಯಾಧಿ ಆಗಿ ಇಷ್ಟು ನೋವು ಅನುಭವಿಸುತ್ತಿದ್ದರೂ ಯಾಕಾಗಿ ವೈದ್ಯರ ಹತ್ತಿರ ಚಿಕಿತ್ಸೆ ಪಡೆಯುತ್ತಿಲ್ಲಾ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸದೇ, ಸಮಾಜದಲ್ಲಿ ಒಳ್ಳೆಯ ಸಂತೃಪ್ತಿ ಬದುಕನ್ನು ಸಾಗಿಸದೇ, ನಾಚಿಕೆಗೆಟ್ಟು ಕಂಡ ಕಂಡವರ ಹತ್ತಿರ ಸಾಲ ಮಾಡಿಕೊಂಡು ಭಂಡ ಬಾಳಲ್ಲಿ ಬದುಕುತ್ತೀರಿ.

ಇನ್ನಾದರೂ ಒಳ್ಳೆಯ ಯೋಚನೆಯ ಸಂಘಟನೆ, ಒಳ್ಳೆಯ ಪರಿಹಾರದತ್ತ ಮುಖ ಮಾಡು ಎಂಜಿಲು ಕಾಸಿನ ಮೂಢ ಮಾನವಾ!

ಹೋಗಲಿ ನಿಮ್ಮ ಮನೆಯಲ್ಲಿ ನಿಮ್ಮ ಅಕ್ಕ, ತಂಗಿ, ಹೆಂಡತಿ, ತಾಯಿ ಮಕ್ಕಳು, ಪರಿಚಯಸ್ಥರು ಪ್ರಸ್ತುತ ಇಷ್ಟು ಪ್ರಮಾಣದಲ್ಲಿ ಯಾಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂತಾ ಕೇಳುವುದಿಲ್ಲವಾ ನಿಮ್ಮನ್ನಾ? ನಿಮ್ಮ ಆತ್ಮಸಾಕ್ಷಿ ಸತ್ತುಹೋಗಿದೆಯಾ?

“ಸಾರಿಗೆ ನೌಕರರಿಗೆ ಒಳ್ಳೆಯದು ಆಗಲಿ” ನೋವಿನೊಂದಿಗೆ ಸಾರಿಗೆ ನೌಕರರು….

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು