NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಡೆಸಿದ ಮುಷ್ಕರದ ವೇಳೆ ಸಾರಿಗೆ ನೌಕರರಿಗೆ ಆಗಿರುವ ಎಲ್ಲ ತೊಂದರೆಗಳನ್ನು ಸರಿಪಡಿಸಿಕೊಡುತ್ತೇನೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ಚಿತ್ರದುರ್ಗದಲ್ಲಿ ಭೇಟಿಯಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿದರು.

ಈ ವೇಳೆ ಮುಷ್ಕರದ ಸಮಯದಲ್ಲಿ ನೌಕರರಿಗೆ ಆಗಿರುವ ವಜಾ, ವರ್ಗಾವಣೆ ಮತ್ತು ಅಮಾನತು ಆದೇಶಗಳನ್ನು ಹಿಂಪಡೆಯಬೇಕೆಂದು ಹಾಗೂ ಮೊದಲು ಕಾರ್ಯನಿರ್ವಹಿಸುತ್ತಿದ್ದ ಸ್ಥಳಗಳಿಗೆ ನಿಯೋಜನೆ ಮಾಡಬೇಕು ಎಂದು ಕೂಟದ ಅಧ್ಯಕ್ಷ ಚಂದ್ರಶೇಖರ್‌ ಮತ್ತು ಪದಾಧಿಕಾರಿಗಳು ಮನವಿ ಮಾಡಿದರು.

ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಾರಿಗೆ ಸಚಿವರು ಆಗಿರುವ ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲೇ ಸರಿಪಡಿಸಿಕೊಡುವುದಾಗಿ ಹೇಳಿದರು.

ಜತೆಗೆ ಡಿಪೋ ಮಟ್ಟದಲ್ಲಿ ನಿರಂತರವಾಗಿ ನೌಕರರ ಮೇಲೆ ನಡೆಯುತ್ತಿರುವ ಕಿರುಕುಳವನ್ನು ತಪ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ನೌಕರರ ಸಮಸ್ಯೆ ಅಲಿಸಿ ಪರಿಹಾರ ಮಾಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಅಲ್ಲದೆ ಮುಂದಿನ ದಿನಗಳಲ್ಲಿ ನೌಕರರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮತ್ತು ನಾಲ್ಕೂ ಸಂಸ್ಥೆಗಳು ಲಾಭದತ್ತ ದಾಪುಗಾಲಿಡಲು ಬೇಕಾದ ಎಲ್ಲ ರೀತಿಯ ಯೋಜನೆಗಳನ್ನು ರೂಪಿಸಲಾಗುವುದು. ಹೀಗಾಗಿ ನೌಕರರು ಎದೆಗುಂದದೆ ನಿಮ್ಮ ಕೆಲಸವನ್ನು ನೀವು ಮಾಡಿ ನಿಮಗೆ ಸರಿಯಾದ ಸಮಯಕ್ಕೆ ವೇತನ ಕೊಡಿಸುವ ಹೊಣೆ ನನ್ನದು ಎಂದು ಭರವಸೆ ನೀಡಿದರು.

ಇನ್ನು ಮುಷ್ಕರದ ವೇಳೆ ನೌಕರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಶೀಘ್ರದಲ್ಲೇ ಪರಿಶೀಲಿಸಿ ನೌಕರರಿಗೆ ತೊಂದರೆ ಆಗದಂತೆ ಪರಿಹರಿಸಲಾಗುವುದು. ಜತೆಗೆ ನೆಮ್ಮದಿಯ ಜೀವನ ಸಾಗಿಲು ಬೇಕಾದ ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿ ತಿಳಿಸಿದರು.

ಸಚಿವರಿಗೆ ಮನವಿ ಸಲ್ಲಿಸುವ ವೇಳೆ ದಾವಣಗೆರೆ, ಚಿತ್ರದುರ್ಗ, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕೂಟದ ಪದಾಧಿಕಾರಿಗಳು ಇದ್ದರು.

ಸಚಿವರ ಭೇಟಿಗೆ ರಾತ್ರಿ ಇಡಿ ಕಾದ ಕೂಟದ ಪದಾಧಿಕಾರಿಗಳು
ಶನಿವಾರ ರಾತ್ರಿಯೇ ಸಚಿವರನ್ನು ಭೇಟಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ಚಿತ್ರದುರ್ಗಕ್ಕೆ ತೆರಳಿದರು. ಆದರೆ, ಸಚಿವರು ಬಳ್ಳಾರಿಯಿಂದ ಪ್ರಯಾಣ ಬೆಳೆಸಿದ್ದರಿಂದ ಆಯಾಸಗೊಂಡಿದ್ದರು. ಹೀಗಾಗಿ ಸಚಿವರನ್ನು ಈಗ ನೋಡಲು ಸಾಧ್ಯವಿಲ್ಲ, ನೀವು ಬೆಳಗ್ಗೆ ಬನ್ನಿ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದರಿಂದ ಕೂಟದ ಪದಾಧಿಕಾರಿಗಳು ರಾತ್ರಿ ಇಡೀ ಅವರಿಗಾಗಿ ಕಾದು ಬೆಳಗ್ಗೆ ಮನವಿ ಪತ್ರ ಸಲ್ಲಿಸಿ ಬಂದಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು