ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳಲ್ಲೂ ಕಳೆದ ಮೂರು ವರ್ಷದಿಂದ ವೇತನ ಪರಿಷ್ಕರಣೆ ಆಗದಿರುವುದನ್ನು ಪ್ರಶ್ನಿಸಿ ಹೈ ಕೋರ್ಟ್ನಲ್ಲಿ ಅತೀ ಇದೇ ಜ.30ರೊಳಗೆ ಅರ್ಜಿಸಲ್ಲಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಮತ್ತು ಹೈ ಕೋರ್ಟ್ ವಕೀಲರಾದ ಎಚ್.ಬಿ. ಶಿವರಾಜು ತಿಳಿಸಿದ್ದಾರೆ.
![](https://vijayapatha.in/wp-content/uploads/2021/08/15-Aug-Shivaraj-h-b1-300x169.jpg)
ಇನ್ನು ವೇತನ ಸೇರಿದಂತೆ ನೌಕರರಿಗೆ ನಿಗಮಗಳಲ್ಲಿ ಆಗುತ್ತಿರುವ ಅನೇಕ ಸಮಸ್ಯೆಗಳನ್ನು ವಿವರವಾಗಿ ಸುಮಾರು 60 ಪುಟಗಳನ್ನೊಳಗೊಂಡ ಈ ಅರ್ಜಿಯನ್ನು ಸಿದ್ಧಪಡಿಸಿದ್ದು, ಹೈ ಕೋರ್ಟ್ಗೆ ಹಾಕುವುದೊಂದೆ ಬಾಕಿ ಇದೆ ಎಂದು ವಿಜಯಪಥಕ್ಕೆ ಶಿವರಾಜು ಮಾಹಿತಿ ನೀಡಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)