NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಸೈಕಲ್‌ ಜಾಥಾಗೆ ಸರ್ಕಾರಿಗೆ ನೌಕರರ ಎಸ್ಸಿ/ಎಸ್ಟಿ ಸಮನ್ವಯ ಸಮಿತಿ ಬೆಂಬಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ (ksrtc employees) ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಮತ್ತು ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸಾರಿಗೆ ನೌಕರರು ನಡೆಸುತ್ತಿರುವ ಸೈಕಲ್ ಜಾಥಾ ಮತ್ತು ಇತರ ಹೋರಾಟಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎಸ್ಸಿ/ಎಸ್ಟಿ ಸಮನ್ವಯ ಸಮಿತಿ (SC/ST Coordination Committee) ಬೆಂಬಲ ನೀಡಿದೆ.

ಈ ವೇಳೆ ಮಾತನಾಡಿದ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಶಿವಶಂಕರ್, ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ನಾವು ಕೂಡ ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಜತೆಗೆ ಅಹಿಂದ ವರ್ಗದ ನೌಕರರನ್ನು ಹೆಚ್ಚಾಗಿ ವಜಾ ಮಾಡಲಾಗಿದ್ದು, ಅವರನ್ನು ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು ಎಂದು ಸಾರಿಗೆ ನಿಗಮಗಳಿಗೆ ಆಗ್ರಹಿಸಿದ್ದಾರೆ.

ಇನ್ನು ಕಳೆದ ಅಕ್ಟೋಬರ್‌ 10ರಿಂದ ಇಂದಿನವರೆಗೂ ಅಂದರೆ 45 ದಿನಗಳಿಂದ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸಿಗಬೇಕು ಎಂದು ಸುಮಾರು 17 ಜಿಲ್ಲೆಗಳನ್ನು 1800 ಕಿಮೀ ಕ್ರಮಿಸಿ ಜಾಥಾ ನಡೆಸುತ್ತಿದ್ದು, ಸರ್ಕಾರದ ಕಣ್ಣು ತೆರೆಸಲು ಮುಂದಾಗಿದ್ದಾರೆ.

ಏನು ಈ ಸೈಕಲ್‌ ಜಾಥಾ ನೌಕರರ ಹಿತದೃಷ್ಟಿಯಿಂದ ನಡೆಯುತ್ತಿದೆಯೋ ಅದಕ್ಕೆ ನಮ್ಮ ಸಂಘದ ಸಂಪೂರ್ಣ ಬೆಂಬಲವಿದೆ. ಇನ್ನು ನೌಕರರು ಕೇಳುತ್ತಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕೂಡ ಮುಂದಾಗಬೇಕು ಎಂದು ಒತ್ತಾತಿಸಿದರು.

ಬಳಿಕ ಸೈಕಲ್‌ ಜಾಥಾದ ನೇತೃತ್ವ ವಹಿಸಿರುವ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್‌ ಮಾತನಾಡಿ, ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಶಿವಶಂಕರ್ ಮತ್ತು ಅವರ ಸಂಘದ ಪದಾಧಿಕಾರಿಗಳಿಗೆ ಸಮಸ್ತ ಸಾರಿಗೆ ನೌಕರರ ಪತಿಯಿಂದ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಕಾರಣ ನಮ್ಮ ಕಷ್ಟ ಮತ್ತು ನೋವುಗಳು ಸರ್ಕಾರಿ ನೌಕರರಿಗೆ ಅರ್ಥವಾಗುತ್ತದೆ. ನಮ್ಮನ್ನು ಇಷ್ಟು ವರ್ಷ ಆಳಿದ ಸಂಘಟನೆಗಳಿಗೆ ಯಾಕೆ ಅರ್ಥವಾಗುತ್ತಿಲ್ಲ ನಮ್ಮ ಕಷ್ಟಗಳು ತಿಳಿಯುತ್ತಿಲ್ಲ. ಹೀಗಾಗಿ ನಮ್ಮ ಹೋರಾಟಕ್ಕೆ ಸಾಥ್‌ ನೀಡುತ್ತಿರುವ ಇವರೆಲ್ಲಿಗೂ ನಾವು ಅಭಾರಿಯಾಗಿದ್ದೇವೆ ಎಂದು ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ