NEWSನಮ್ಮರಾಜ್ಯ

ಸಾರಿಗೆ ಮಹಿಳಾ ಅಧಿಕಾರಿ, ಸಿಬ್ಬಂದಿಗಳ ಸ್ವ ರಕ್ಷಣೆಗೆ ಆದ್ಯತೆ: ಅಧ್ಯಕ್ಷ ನಂದೀಶ್ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಾಗ್ವಾರ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಬೋಧಿಸುವ ಸ್ವರಕ್ಷಣ ಕೌಶಲ್ಯವನ್ನು ಆಸಕ್ತಿಯಿಂದ ಕಲಿತಲ್ಲಿ ತಮ್ಮನ್ನು ತಾವೇ ರಕ್ಷಣೆ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷ ಎನ್‌.ಎಸ್. ನಂದೀಶ್ ರೆಡ್ಡಿ ಸಂಸ್ಥೆಯ ಮಹಿಳಾ ನೌಕರರಿಗೆ ಸಲಹೆ ನೀಡಿದರು.

ನಿರ್ಭಯ ಯೋಜನೆಯಡಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿ ನಾಲ್ಕನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಸಂಸ್ಥೆಯ ಎಲ್ಲ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆಯೋಜಿಸಿರುವ ಸ್ವರಕ್ಷಣೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇದರ ಜತೆಗೆ ದೈನಂದಿನ ಬದುಕಿನಲ್ಲಿ ಪ್ರತಿದಿನ ಪ್ರಾಣಾಯಾಮಗಳನ್ನು ಮಾಡುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ದೃಢತೆ ಹೊಂದಲು ಸಾಧ್ಯವಿದೆ. ಇದನ್ನು ಅಳವಡಿಸಿಕೊಳ್ಳಲು ಮುಂದಾಗಿ ಎಂದು ಸಲಹೆ ನೀಡಿದರು.

ಮಹಿಳಾ ಅಧಿಕಾರಿ ಸಿಬ್ಬಂದಿಗಳಿಗೆ ಸ್ವ ರಕ್ಷಣಾ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಿರ್ಭಯ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಶೇ. 60ರಷ್ಟು ಮತ್ತು ರಾಜ್ಯ ಸರ್ಕಾರ ಶೇ.40 ರಷ್ಟು ಒಟ್ಟು 1.80 ಕೋಟಿ ರೂ. ಅನುದಾನವನ್ನು ಒದಗಿಸಿದೆ. ಅದನ್ನು ಸಂಸ್ಥೆಯ 3000 ಮಹಿಳಾ ಅಧಿಕಾರಿ, ನೌಕರರು ಸ್ವ ರಕ್ಷಣೆಯ ತರಬೇತಿ ಪಡೆಯಲಿದ್ದು ತರಬೇತಿಯು 64 ಗಂಟೆಗಳು, 32 ದಿನಗಳ ಪ್ರಾಯೋಗಿಕ ಮತ್ತು ಬೋಧನಾ ತರಬೇತಿಯನ್ನು ಒಳಗೊಂಡಿದೆ ಎಂದು ತಿಳಿಸಿದರು.

ಬಿಎಂಟಿಸಿ ಉಪಾಧ್ಯಕ್ಷ ಡಾ. ಎನ್.ಆರ್. ವೆಂಕಟೇಶ್ ಮಾತನಾಡಿ, ಸಂಸ್ಥೆಯು ಮಹಿಳೆಯರಿಗೆ ಆಯೋಜಿಸುತ್ತಿರುವ ಸ್ವ ರಕ್ಷಣ ತರಬೇತಿಯು ಪ್ರಾಯೋಗಿಕ ಹಾಗೂ ಬೋಧನೆ ಆಧಾರಿತ ತರಬೇತಿ ಯಾಗಿದೆ. karate-do, ಮಾರ್ಸಲ್ ಮುಂತಾದ ಪ್ರಾಯೋಗಿಕ ತರಬೇತಿ ಹಾಗೂ ಕಾನೂನು ಅರಿವನ್ನು ಮೂಡಿಸಲಾಗುತ್ತದೆ ಎಂದು ತಿಳಿಸಿದರು.

ಇನ್ನು ನಿತ್ಯ ಜನವದಲ್ಲಿ ಒಡನಾಟ ಹೊಂದುವ ಸಾರ್ವಜನಿಕರೊಂದಿಗೆ ಸಂವಹನೆ, ಸಮಾಲೋಚನೆ, ಕೌಶಲ್ಯ, ಲಿಂಗ ಸಂವೇದನೆ ಅಂತಹ ವಿಷಯಗಳ ಬಗ್ಗೆಯೂ ಸಹ ತರಬೇತಿಯನ್ನು ನೀಡಲಾಗುತ್ತದೆ. ಇದನ್ನು ಎಲ್ಲಾ ವಯೋಮಾನದ ಮಹಿಳೆಯರು ಸುಲಭವಾಗಿ ಅಳವಡಿಸಿಕೊಳ್ಳಬಹುದಾಗಿದೆ. ಮಹಿಳೆಯರು ತಮ್ಮ ದೈನಂದಿನ ಜೀವನದಲ್ಲಿ ತೊಂದರೆಗಳನ್ನು ಸಮರ್ಥವಾಗಿ ಎದುರಿಸಲು ಇದು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು..

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಟಿ. ರೆಜು ಮಾತನಾಡಿ, ಮಹಿಳಾ ನೌಕರರು ಸ್ವ ರಕ್ಷಣ ತರಬೇತಿ ಪಡೆಯುವುದರಿಂದ ಅನಿರೀಕ್ಷಿತ ಘಟನೆಗಳು ಸಂಭವಿಸಿದಾಗ ತಮ್ಮನ್ನು ತಾವೇ ರಕ್ಷಿಸಿಕೊಳ್ಳಬಹುದು. ಜೊತೆಗೆ ಮಹಿಳಾ ಪ್ರಯಾಣಿಕರ ರಕ್ಷಣೆಗೆ ಸಹಾಯ ಮಾಡಲು ಈ ತರಬೇತಿ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕ ಡಾ. ಅರುಣ್, ಮಂಡಳಿ ನಿರ್ದೇಶಕರಾದ ಟಿ.ಪಿ, ಪ್ರಕಾಶ್, ಶ್ರೀಧರ್ ಕಲ್ಲೂರು, ಕೆ.ಪಿ ಭೃಗೇಶ್‌, ಅಧಿಕಾರಿ ಜಾಗ್ವರ್ ಸ್ಪೋರ್ಟ್ಸ್ ಅಕಾಡೆಮಿಯ ಮುಖ್ಯ ತರಬೇತುದಾರ ಪ್ರೊ. ಪ್ರಸಾದ್‌, ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು