ನಮ್ಮರಾಜ್ಯ

ಸೇವಾ ಮಿತ್ರ ಚಾಮರಾಜನಗರ ಜಿಲ್ಲೆಯಲ್ಲಿ ಯಶಸ್ವಿ ಅನುಷ್ಠಾನ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ವಿವಿಧ ಪಿಂಚಣಿ ಸೌಲಭ್ಯವನ್ನು ಪಡೆಯಲು ನಾಗರಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಮನೆ ಬಾಗಿಲಿಗೆ ಸೇವೆ ತಲುಪಿಸುವ ಉದ್ದೇಶದಿಂದ ಆರಂಭಗೊಂಡ ಸೇವಾ ಮಿತ್ರ ಯೋಜನೆ, ಜಿಲ್ಲೆಯಲ್ಲಿ ಯಶಸ್ವಿಯಾಗಿ ಸಾರ್ವಜನಿಕರಿಗೆ ಸೇವೆಗಳನ್ನು ಒದಗಿಸುತ್ತಿದೆ. ಅನುಷ್ಠಾನಗೊಂಡ ಕೆಲ ದಿನಗಳಲ್ಲೇ ನಾಗರಿಕರ ಮನವಿಗೆ ಕೂಡಲೇ ಸ್ಪಂದಿಸುವ ಮುಖೇನ ಅನೇಕರು ತಮ್ಮ ಸೌಲಭ್ಯವನ್ನು ತ್ವರಿತವಾಗಿ ಪಡೆಯಲು ಸಹಾಯಕವಾಗಿದೆ.

ಸೇವಾ ಮಿತ್ರ ಯೋಜನೆಯಡಿ ಸದ್ಯ ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾಸುರಕ್ಷಾ ಯೋಜನೆ, ಅಂಗವಿಕಲ ಯೋಜನೆ, ಮನಸ್ವಿನಿ ಯೋಜನೆ ಹಾಗೂ ಮೈತ್ರಿ ಯೋಜನೆಗಳ ಪಿಂಚಣಿಯ ಅರ್ಹ ಫಲಾನುಭವಿಗಳಿಗೆ ಸೇವೆ ಒದಗಿಸುವ ಕೆಲಸ ಮಾಡಲಾಗುತ್ತಿದೆ.

ಹೇಗೆ ಕಾರ್ಯನಿರ್ವಹಿಸುತ್ತಿದೆ?

ಪಿಂಚಣಿ ಸೌಲಭ್ಯಕ್ಕಾಗಿ ಆಯಾ ತಾಲ್ಲೂಕಿನ ಕಂಟ್ರೋಲ್ ರೂಂ ಗೆ ಬಂದ ಮನವಿಗಳನ್ನು ಕೂಡಲೇ ಸ್ವೀಕರಿಸಿ, ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳು(ಸೇವಾ ಮಿತ್ರ) ಫಲಾನುಭವಿಗಳ ಮನೆಗೆ ಖುದ್ದು ತೆರಳಿ ಅಗತ್ಯ ದಾಖಲಾತಿಗಳನ್ನು ಪಡೆಯುತ್ತಿದ್ದಾರೆ. ನಂತರ ಅರ್ಜಿಗಳನ್ನು ನಿಯಮಾನುಸಾರ ಶೀಘ್ರವಾಗಿ ಕಚೇರಿಯಲ್ಲಿ ಪರಿಶೀಲಿಸಿ, ಅರ್ಹರಿಗೆ ಪಿಂಚಣಿ ಮಂಜೂರು ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಮನೆಗೆ ಭೇಟಿ ನೀಡಿ ಮಂಜೂರಾತಿ ಆದೇಶ ಪತ್ರವನ್ನೂ ನೀಡಲಾಗುತ್ತಿದೆ.

ಅದರಂತೆ ಈವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕಂಟ್ರೋಲ್ ರೂಂಗಳಿಂದ ಒಟ್ಟು 370 ಕರೆಗಳು ಸ್ವೀಕೃತವಾಗಿದ್ದು, ಸೇವಾ ಮಿತ್ರ ಜಾರಿಗೆ ಬಂದ 15 ದಿನಗಳಲ್ಲಿ 63 ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮಂಜೂರು ಮಾಡಿ, ಮಂಜೂರಾತಿ ಪತ್ರವನ್ನೂ ಸಹ ನೀಡಲಾಗಿದೆ. ಉಳಿದ ಪ್ರಕರಣಗಳು ಕಾರ್ಯರೂಪದ ಹಂತದಲ್ಲಿದ್ದು, ಶೀಘ್ರವಾಗಿ ಸೇವೆ ದೊರೆಯುವಂತೆ ಮಾಡುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ.

ಕರೆ ಮಾಡಿ ಸೇವೆ ಪಡೆಯಿರಿ

ಸೇವಾ ಮಿತ್ರಕ್ಕಾಗಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದೆಲ್ಲಾ ದಿನಗಳ ಕಚೇರಿ ಸಮಯದಲ್ಲಿ ಅಂದರೆ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಆಯಾ ತಾಲ್ಲೂಕು ಕಂಟ್ರೋಲ್ ರೂಂ ಗೆ ಕರೆ ಮಾಡಿ ಮನವಿ ಸಲ್ಲಿಸಬಹುದು. ಚಾಮರಾಜನಗರ- ದೂ.ಸಂ: 08226-222046, ಕೊಳ್ಳೇಗಾಲ- ದೂ.ಸಂ: 08224-252042, ಗುಂಡ್ಲುಪೇಟೆ- ದೂ.ಸಂ:08229-222225, ಯಳಂದೂರು- ದೂ.ಸಂ: 08226-240029 ಹಾಗೂ ಹನೂರು- ದೂ.ಸಂ: 08224-268032 ಅನ್ನು ಸಂಪರ್ಕಿಸಿ ಸೌಲಭ್ಯ ಪಡೆಯಬಹುದಾಗಿದೆ.

ಈ ಯೋಜನೆಯಿಂದ ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯವನ್ನು ಮಧ್ಯವರ್ತಿಗಳ ಹಾವಳಿ ಹಾಗೂ ಅನವಶ್ಯಕ ಅಲೆದಾಟವಿಲ್ಲದೇ ಪಡೆಯಲು ಅನುಕೂಲವಾಗಿದೆ. ವಿಶೇಷವಾಗಿ ವಯೋವೃದ್ಧರು, ಅಂಗವಿಕರು ಹಾಗೂ ವೈಯಕ್ತಿಕವಾಗಿ ನೊಂದವರಿಗೆ ಸೇವಾ ಮಿತ್ರ ಯೋಜನೆ ವರದಾನವಾಗಿದೆ.

ಜಿಲ್ಲೆಯಲ್ಲಿ ಸೇವಾ ಮಿತ್ರ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ಈಗಾಗಲೇ ಸಾಕಷ್ಟು ಮನವಿಗಳು ಸಲ್ಲಿಕೆಯಾಗಿದ್ದು, ಆ ಎಲ್ಲಾ ಮನವಿಗಳಿಗೆ ಕೂಡಲೇ ಸ್ಪಂದಿಸಿ, ಮನೆ ಬಾಗಿಲಿಗೆ ಸೇವೆ ಒದಗಿಸಲಾಗುತ್ತಿದೆ. ಯೋಜನೆ ಜಾರಿಗೆ ಬಂದ 15 ದಿನಗಳಲ್ಲೇ ಅನೇಕ ಮಂದಿ ಪ್ರಯೋಜನ ಪಡೆದಿದ್ದಾರೆ. ಮುಂದೆಯೂ ಇದೇ ವೇಗದಿಂದ ಕಾರ್ಯನಿರ್ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ