NEWSನಮ್ಮಜಿಲ್ಲೆ

ಹಿಟ್ನೇಹೆಬ್ಬಾಗಿಲು ಗ್ರಾಪಂ ಅಧ್ಯಕ್ಷರಾಗಿ ಸರೋಜಮ್ಮ ಅವಿರೋಧ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ ಹಿಟ್ನೇಹೆಬ್ಬಾಗಿಲು ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸರೋಜಮ್ಮ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಕ್ಷದ ಆಂತರಿಕ ಒಪ್ಪಂದದಂತೆ ಈ ಹಿಂದೆ ಅಧ್ಯಕ್ಷರಾಗಿದ್ದ ಛಾಯಾಮಣಿ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಸಲಾಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸರೋಜಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಒಟ್ಟಾರೆ 19 ಗ್ರಾಮ ಪಂಚಾಯಿತಿ ಸದಸ್ಯರಲ್ಲಿ 17 ಜನ ಕಾಂಗ್ರೆಸ್, 1ಜೆಡಿಎಸ್ ಹಾಗೂ 1 ಬಿಜೆಪಿ ಬೆಂಬಲಿತ ಸದಸ್ಯರಿದ್ದು ಈ ಪಂಚಾಯಿತಿಯಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿಸುತ್ತಲೇ ಬಂದಿದೆ.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಿಟ್ನಳ್ಳಿ ಪರಮೇಶ್ ಮಾತನಾಡಿ, ತಾಲೂಕಿನಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ದೊರಕುತ್ತಿರುವುದು ಮುಂದಿನ ಚುನಾವಣೆಗಳ ದಿಕ್ಸೂಚಿಯಾಗಿದೆ ಎಂದರು.

ಚುನಾವಣಾಧಿಕಾರಿಯಾಗಿ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ ಕಾರ್ಯನಿರ್ವಹಿಸಿದ್ದು, ಪಿಡಿಒ ನಾಗೇಂದ್ರ ಕುಮಾರ್, ಉಪಾಧ್ಯಕ್ಷೆ ಸುಧಾ ಶಿವಣ್ಣ, ಮಾಜಿ ಅಧ್ಯಕ್ಷೆ ಮೀನಾಕ್ಷಮ್ಮ ಬಸವಣ್ಣ, ಸದಸ್ಯರಾದ ಅನಿಲ್ ಕುಮಾರ್, ವಿಜಯಕುಮಾರ್, ಕಾಮರಾಜ್, ಎಚ್.ಎಸ್‌ಕುಮಾರ್, ವನಜಾಕ್ಷಮ್ಮ, ವರನಂದಿ, ಯಶೋದಮ್ಮ, ರವಿಕುಮಾರ್, ಸಾಕಮ್ಮ, ಮಂಜು ನಾಯ್ಕ, ಶಿವಕುಮಾರ್ ತಾಪಂ ಮಾಜಿ ಸದಸ್ಯ ರಾದ ಟಿ.ಈರಯ್ಯ, ಅಣ್ಣಯ್ಯ.

ಮುಖಂಡರಾದ ಹೊಲದಪ್ಪ, ಮಾಸ್ಟ್ರು ಮೋಹನ್, ಎಚ್.ಬಿ.ಶಿವರುದ್ರ, ಜಯಶಂಕರ್, ಈಚೂರ್ ಲೋಕೇಶ್, ದಿನೇಶ್, ಈರೇಗೌಡ, ತಮ್ಮಬೋವಿ, ಆರ್.ಎಸ್.ಮಹದೇವ್, ಶಿವಶಂಕರ್, ಪುಟ್ಟರಾಜ್, ಕುಮಾರ್, ಚಿಕ್ಕೇಗೌಡ, ಸೇರಿದಂತೆ ಮತ್ತಿತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು