NEWSಕ್ರೀಡೆದೇಶ-ವಿದೇಶ

ಹೀನಾಯ ಸೋಲಿನ ಬಳಿಕ ಬಿಕ್ಕಿ ಬಿಕ್ಕಿ ಅತ್ತರು ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ

ವಿಜಯಪಥ ಸಮಗ್ರ ಸುದ್ದಿ

ಆಡಿಲೇಡ್‌: ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಹೀನಾಯ ಸೋತ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಪಂದ್ಯ ಮುಗಿದ ಬಳಿಕ ರೋಹಿತ್‌ ಶರ್ಮಾ ಡಗೌಟ್‌ನಲ್ಲಿ ಕುಳಿತು ಕಣ್ಣೀರು ಹಾಕಿದ್ದಾರೆ. ತಲೆಯನ್ನು ಕೆಳಗೆ ಹಾಕಿ ಬೇಸರ ವ್ಯಕ್ತಪಡಿಸುತ್ತಿದ್ದಾಗ ಕೋಚ್‌ ದ್ರಾವಿಡ್‌ ಸಮಾಧಾನ ಮಾಡಿದ್ದಾರೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಭಾರತ ಆರಂಭದಲ್ಲೇ ರಾಹುಲ್‌ ವಿಕೆಟ್‌ ಕಳೆದುಕೊಂಡರೂ ನಂತರ ರೋಹಿತ್‌ ಮತ್ತು ಕೊಹ್ಲಿ ನಿಧಾನವಾಗಿ ಆಡಿ ಇನ್ನಿಂಗ್ಸ್‌ ಕಟ್ಟಿದರು. ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ ಬಿರುಸಿನ ಆಟವಾಡಿದ್ದರಿಂದ ತಂಡದ ಮೊತ್ತ 160ರ ಗಡಿ ದಾಟಿತ್ತು. ಅಂತಿಮವಾಗಿ ಭಾರತ 6 ವಿಕೆಟ್‌ ನಷ್ಟಕ್ಕೆ 168 ರನ್‌ ಗಳಿಸಿತ್ತು.

ಸವಾಲಿನ ಮೊತ್ತವೇ ಆಗಿದ್ದರೂ ಭಾರತದ ಬೌಲರ್‌ಗಳಿಂದ ಉತ್ತಮ ಪ್ರದರ್ಶನ ಕಂಡು ಬರಲಿಲ್ಲ. ಜೋಸ್‌ ಬಟ್ಲರ್‌ ಮತ್ತು ಅಲೆಕ್ಸ್‌ ಹೇಲ್ಸ್‌ ಬೌಂಡರಿ, ಸಿಕ್ಸರ್‌ ಸಿಡಿಸಿ ತಂಡವನ್ನು ಫೈನಲಿಗೆ ಕೊಂಡೊಯ್ದರು. ಬಟ್ಲರ್‌ 80 ರನ್‌(49 ಎಸೆತ, 9 ಬೌಂಡರಿ, 3 ಸಿಕ್ಸರ್‌) ಅಲೆಕ್ಸ್‌ ಹೇಲ್ಸ್‌ 86 ರನ್‌(47 ಎಸೆತ, 4 ಬೌಂಡರಿ, 7 ಸಿಕ್ಸರ್‌) ಚಚ್ಚಿ ಇಂಗ್ಲೆಂಡ್‌ಗೆ 10 ವಿಕೆಟ್‌ಗಳ ಜಯವನ್ನು ತಂದುಕೊಟ್ಟರು.

ಭಾರತದ ಮೊದಲ 10 ಓವರ್‌ಗಳಲ್ಲಿ ಜಾಸ್ತಿ ರನ್‌ ಬಂದಿರಲಿಲ್ಲ. ಮೊದಲ ಪವರ್‌ ಪ್ಲೇ 6 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 38 ರನ್‌ ಗಳಿಸಿತ್ತು. 10 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 62 ರನ್‌ ಗಳಿಸಿತ್ತು. 15 ಓವರ್‌ಗಳಲ್ಲಿ 100 ರನ್‌ ಬಂದಿದ್ದರೆ ಕೊನೆಯ 30 ಎಸೆತಗಳಲ್ಲಿ 68 ರನ್‌ ಬಂದಿತ್ತು.

ಇತ್ತ ಇಂಗ್ಲೆಂಡ್‌ ಮೊದಲ ಓವರಿನಿಂದಲೇ ದಂಡಿಸಲು ಆರಂಭಿಸಿತ್ತು ಮತ್ತು ಓವರ್‌ ಒಂದಕ್ಕೆ ಸರಾಸರಿ 10 ರನ್‌ಗಳು ಬರುತ್ತಿದ್ದವು. ಮೊದಲ ಪವರ್‌ ಪ್ಲೇನಲ್ಲಿ 63 ರನ್‌ ಬಂದರೆ 10.1 ಓವರ್‌ನಲ್ಲಿ 100 ರನ್‌ ಬಂದಿತ್ತು. ಕೇವಲ 83 ಎಸೆತಗಳಲ್ಲಿ 150 ರನ್‌ ದಾಖಲಾಗಿತ್ತು. ಅಂತಿಮವಾಗಿ 16 ಓವರ್‌ಗಳಲ್ಲಿ 170 ರನ್‌ ಹೊಡೆಯುವ ಮೂಲಕ ಇಂಗ್ಲೆಂಡ್‌ ಫೈನಲ್‌ ಪ್ರವೇಶಿಸಿತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ