NEWSನಮ್ಮರಾಜ್ಯರಾಜಕೀಯ

ಹಾರ ತುರಾಯಿ, ಸನ್ಮಾನಗಳಿಗೆ ಕಡಿವಾಣ ಹಾಕಿ, ಆ ಹಣವನ್ನು ಸಮಾಜಸೇವೆಗೆ ಬಳಸಿ: ಎಎಪಿ ಕಾರ್ಯಕರ್ತರಿಗೆ ಪೃಥ್ವಿ ರೆಡ್ಡಿ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿಯ ಸಭೆ ಸಮಾರಂಭಗಳಲ್ಲಿ ಹಾರ, ಶಲ್ಯ ಮುಂತಾದವುಗಳಿಗೆ ಅನಗತ್ಯ ವೆಚ್ಚ ಮಾಡುವ ಬದಲು ಆ ಹಣವನ್ನು ಕಾರ್ಯಕರ್ತರು ಸಮಾಜಸೇವೆಗೆ ಬಳಸಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ  ಮನವಿ ಮಾಡಿದ್ದಾರೆ.

ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಮನವಿ ಮಾಡಿರುವ ಪೃಥ್ವಿ ರೆಡ್ಡಿ, “ಆಮ್‌ ಆದ್ಮಿ ಪಾರ್ಟಿಯ ಸಭೆ ಸಮಾರಂಭಗಳಲ್ಲಿ ಹಾರ, ಹೂವಿನ ಗುಚ್ಛ, ಶಲ್ಯ, ಪೇಟ, ನೆನಪಿನ ಕಾಣಿಕೆ ಮುಂತಾದವುಗಳಿಗೆ ಖರ್ಚು ಮಾಡುತ್ತಿರುವುದು ಅಲ್ಲಲ್ಲಿ ಕಂಡುಬರುತ್ತಿದೆ.

ಇಂತಹ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ, ಆ ಹಣವನ್ನು ನಾವು ಸಮಾಜಸೇವೆಗೆ ಬಳಸಬಹುದಾಗಿದೆ. ಸಹಾಯದ ಅಗತ್ಯವಿರುವ ಬಡವರು, ಶೋಷಿತರು, ನೊಂದವವರಿಗೆ ನೆರವಾಗಲು ಈ ಹಣ ಬಳಕೆಯಾಗಬೇಕು. ಆಮ್‌ ಆದ್ಮಿ ಪಾರ್ಟಿಯ ತತ್ತ್ವ ಸಿದ್ಧಾಂತ ಕೂಡ ಇದನ್ನೇ ಹೇಳುತ್ತದೆ ಎಂದು ಸಲಹೆ ನೀಡಿದ್ದಾರೆ.

ಬೇರೆ ಪಕ್ಷಗಳಿಗೂ ಆಮ್‌ ಆದ್ಮಿ ಪಾರ್ಟಿಗೂ ಸಾಕಷ್ಟು ವ್ಯತ್ಯಾಸವಿದೆ. ಬೇರೆ ಪಕ್ಷಗಳು ಆಡಂಬರದಲ್ಲಿ ನಂಬಿಕೆ ಹೊಂದಿದ್ದರೆ, ನಾವು ಜನಸೇವೆಯಲ್ಲಿ ನಂಬಿಕೆ ಇಡೋಣ. ದೇಶವು ನಿಜವಾಗಿಯೂ ಅಭಿವೃದ್ಧಿ ಹೊಂದಬೇಕಾದರೆ ಎಲ್ಲ ವರ್ಗಗಳ ಜನರೂ ನೆಮ್ಮದಿಯಿಂದ ಬದುಕುವಂತಾಗಬೇಕು.

ಆದ್ದರಿಂದ ನಮ್ಮ ತನು, ಮನ, ಧನವನ್ನು ಎಲ್ಲ ಜನಸಾಮಾನ್ಯರ ಏಳಿಗೆಗೆ ಮೀಸಲಿಡೋಣ. ಬೇರೆ ಪಕ್ಷಗಳಿಗೆ ಮಾದರಿಯಾಗುವಂತೆ ಸರಳ ಹಾಗೂ ಶಿಸ್ತಿನಿಂದ ಸಭೆ ಸಮಾರಂಭಗಳನ್ನು ನಡೆಸೋಣ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್...