NEWSಸಂಸ್ಕೃತಿ

ಹಿರಿಯ ಸಾಹಿತಿ ಡಾ. ರಾಜೇಗೌಡ ಹೊಸಹಳ್ಳಿ ನಿಧನ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಹಿರಿಯ ಸಾಹಿತಿಗಳು ಹಾಗೂ ಸಂಸ್ಕೃತಿ ಚಿಂತಕರೂ ಆದ ಆಲೂರು ತಾಲೂಕು ಮರಸು ಹೊಸಹಳ್ಳಿಯ ಡಾ. ರಾಜೇಗೌಡ ಹೊಸಹಳ್ಳಿ ಅವರು ಇಂದು ನಿಧನರಾದರು.
 ಜಿಲ್ಲೆಯ ಆಲೂರು ತಾಲೂಕಿನ ಮರಸು ಹೊಸಹಳ್ಳಿ ಗ್ರಾಮದಲ್ಲಿ 1949 ರ ಜುಲೈ 6 ರಂದು ಎಚ್.ಎಸ್ ರಂಗಪ್ಪ ಹಾಗೂ ರಂಗಮ್ಮನವರ ಪುತ್ರರಾಗಿ ಜನಿಸಿದ ಇವರು 1974 ರಲ್ಲಿ ಮಂಗಳೂರಿನ ಮಂಗಳ ಗಂಗೋತ್ರಿಯಲ್ಲಿ ಕನ್ನಡ ಎಂ.ಎ. ಪದವಿ ಪಡೆದು 1976 ರಲ್ಲಿ ನೋಂದಣಿ ಹಾಗೂ ಮುದ್ರಾಂಕ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ 2006 ರಲ್ಲಿ ಸ್ವಯಂ ನಿವೃತ್ತಿ ಪಡೆದರು.  ಈ ನಡುವೆ ಸಾಹಿತ್ಯ ಪ್ರವೃತ್ತಿಯಾಗಿ 2001 ಡಾಕ್ಟರೇಟ್ ಪ್ರಶಸ್ತಿ ಪಡೆದಿದ್ದರು.
 ತಮ್ಮ ಜೀವನ ಕಾಲದಲ್ಲಿ ಸತ್ಯಭೋಜರಾಜ, ಮಗನ ತಿಂದ ಮಾರಾಯನ ದುರ್ಗ, ಕೋಳಿ ಮತ್ತು ತುಳಸಿ ಕಟ್ಟೆ, ಜಾನಪದ ಸಂಕಥನ, ಅಕ್ಕಯ್ಯನ ಸಂಸಾರ, ತಾಳ ಬಂದೋ ತಂಬೂರಿ ಬಂದೋ, ನೋಂದಣಿ ಕೈಪಿಡಿ, ಮಲೆನಾಡ ಸೆರಗಲ್ಲಿ ನಿಂತು, ಪ್ರಾಚೀನ ಕನ್ನಡ ಕಾವ್ಯಗಳಲ್ಲಿ ಜಾನಪದೀಯತೆ, ಅರಿವಿನ ಕುರುಹು, ಉದರದೊಳು ಹಸಿರುಕ್ಕಿ, ಗಾಂಧಿವಾದಿ ಬಿ.ಎನ್ ಬೋರಣ್ಣಗೌಡ, ಗಾಂಧಿ ಸಂಕಥನ, ದೇವರ ನಾಲಿಗೆಯನ್ನು ಕತ್ತರಿಸುವ ಕಥನ, ಆಧುನಿಕತೆ ಎಂಬ ಮಾಯಾ ಕತ್ತರಿ, ಮಹಾತ್ಮ ಗಾಂಧಿ( ಅಂತಿಮ ಹಂತ) ಎಂಬ ಪ್ರಮುಖ ಕೃತಿಗಳನ್ನು ಇವರು ರಚಿಸಿದ್ದರು.
 ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಸಾಹಿತಿಗಳು ಹಾಗೂ ಜಿಲ್ಲಾ ಜಾನಪದ ಪರಷತ್ ಅಧ್ಯಕ್ಷ ಹಂಪನಹಳ್ಳಿ ತಿಮ್ಮೇಗೌಡ, ಸಾಹಿತಿ ರೂಪಾ ಹಾಸನ್,ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷರಾದ ರವಿ ನಾಕಲಗೂಡು, ಕೊಟ್ರೇಶ್ ಉಪ್ಪಾರ್, ಶ್ರೀ ಪಡ್ರೆ, ಅಪ್ಪಾಜಿ ಗೌಡ, ಮಾಂತೇಶ್, ಪ್ರಗತಿಪರರಾದ ಸುಬ್ಬ ಸ್ವಾಮಿ, ಕಿಶೋರ್ ಕುಮಾರ್ ಮತ್ತಿತರರು ಡಾ. ರಾಜೇಗೌಡ ಹೊಸಹಳ್ಳಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ