CrimeNEWSನಮ್ಮಜಿಲ್ಲೆ

ಹುಲಿ ಉಗುರು, ಹಲ್ಲುಗಳ ಸಾಗಿಸುತ್ತಿದ್ದ ಇಬ್ಬರು ಖದೀಮರ ಬಂಧನ  

ವಿಜಯಪಥ ಸಮಗ್ರ ಸುದ್ದಿ

ಹನೂರು: ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮದ ಅಡ್ಡ ರಸ್ತೆ ಬಳಿ ಆಕ್ರಮವಾಗಿ ಹುಲಿ ಉಗುರು ಹಾಗೂ ಹಲ್ಲುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ಅಂಡೆಕುರುಬರ ದೊಡ್ಡಿ ಗ್ರಾಮದ ಗೋಪಾಲ ಹಾಗೂ ರಾಯಚೂರು ಜಿಲ್ಲೆಯ ಹನುಮೇಶ ಬಂಧಿತರು.

ಘಟನೆ ವಿವರ : ಜ.16 ರಂದು ಸಂಜೆ 8 ರ ಸಮಯದಲ್ಲಿ, ಕಚೇರಿಯಲ್ಲಿದ್ದಾಗ ಭಾತ್ಮಿದಾರರ ಮಾಹಿತಿ ಬಂದ ಮೇರೆಗೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿ.ಜಿ.ಪಾಳ್ಯ ಗ್ರಾಮದ ಅಡ್ಡರಸ್ತೆ, ಹತ್ತಿರ ಕೆ.ಎ-10 ಎಲ್-3616 ಹೀರೋ ಹೊಂಡಾ ಗ್ಲಾಮರ್ ನಲ್ಲಿ ಯಾರೋ ಆಸಾಮಿಗಳು ಹುಲಿಯ ಉಗುರುಗಳನ್ನು ಆಕ್ರಮವಾಗಿ  ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದುದನ್ನು ಪತ್ತೆಮಾಡಿ ಅವರ ಬಳಿ ಇದ್ದ ವನ್ಯಜೀವಿ ಹುಲಿಯ 40 ಉಗುರುಗಳು ಹಾಗೂ ಹುಲಿಯ 02 ಹಲ್ಲುಗಳು ಆರೋಪಿಗಳಿಬ್ಬರ ಸಮೇತ ವಶಕ್ಕೆ‌ ಪಡೆಯಲಾಗಿದೆ.

ಹುಲಿಯ ಉಗುರುಗಳು ಹಾಗೂ ಹಲ್ಲುಗಳನ್ನು ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದುದು ವನ್ಯಜೀವಿ ಸಂರಕ್ಷಾಣಾ ಕಾಯ್ದೆ 1972 ರ ಅಡಿಯಲ್ಲಿ ಅಪರಾಧ ಮಾಡಿರುವುದು ಕಂಡು ಬಂದ ಮೇರೆಗೆ ಪ್ರಕರಣ ದಾಖಲಿಸಿಕೊಂಡು  ಮುಂದಿನ ಕ್ರಮ ಕೈಗೊಂಡಿದ್ದಾರೆ.

ದಾಳಿಯಲ್ಲಿ ಪಿಎಸ್ಐ ವಿಜಯ್ ರಾಜ್, ಮುಖ್ಯಪೇದೆಗಳಾದ ಶಂಕರ್, ಬಸವರಾಜು, ಸ್ವಾಮಿ, ರಾಮಚಂದ್ರ, ಚಾಲಕ ಪ್ರಭಾಕರ್ ಇತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ