NEWSನಮ್ಮರಾಜ್ಯಸಂಸ್ಕೃತಿ

ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಹಾಸನದ ಹಾಸನಾಂಬೆ ದೇವಿ ಉತ್ಸವ ಭಾನುವಾರ (ನ.3) ಸಂಪನ್ನಗೊಂಡಿದೆ. 11 ದಿನಗಳ ಉತ್ಸವದಲ್ಲಿ 9 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬರೋಬ್ಬರಿ 20.40 ಲಕ್ಷ ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದುಕೊಂಡಿದ್ದಾರೆ.

ಕಳೆದ ವರ್ಷ 14 ಲಕ್ಷ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರು. ಈ ವರ್ಷ ಶಕ್ತಿ ಯೋಜನೆಯ ಎಫೆಕ್ಟ್​ನಿಂದಾಗಿ 20.40 ಲಕ್ಷ ಭಕ್ತರು ಜಗನ್ಮಾತೆಯ ದರ್ಶನ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.

ಈ ನಡುವೆ ಹುಂಡಿ ಹಣ ಬಿಟ್ಟು ಕೇವಲ ಟಿಕೆಟ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ 9.69 ಕೋಟಿ ರೂ.ಗಳಷ್ಟು ಆದಾಯ ಸಂಗ್ರಹವಾಗಿದ್ದರೆ, ಹುಂಡಿ ಕಾಣಿಕೆಯನ್ನು ಸೇರಿಸಿದರೆ 12,63,83,808 ಆದಾಯ ಸಂಗ್ರಹವಾಗಿದೆ. ಇಷ್ಟೊಂದು ಪ್ರಮಾಣದ ಆದಾಯ ಹಾಸನಾಂಬೆ ದರ್ಶನದ ಇತಿಹಾಸದಲ್ಲೇ ದಾಖಲೆಯಾಗಿದೆ.

ಸೋಮವಾರವಾದ ಇಂದು (ನ.4) 500 ಜನರಿಂದ 7 ಗಂಟೆಗಳ ಕಾಲ ಹಾಸನಾಂಬೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಒಟ್ಟಾರೆ 9 ದಿನಗಳ ಕಾಲ ನಡೆದ ಹಾಸನಾಂಬೆ ದರ್ಶನ ವೇಳೆ 12,63,83,808 ರೂ. ಕಾಣಿಕೆ ಸಂಗ್ರವಾಗಿದೆ.

1000, 300 ಟಿಕೆಟ್, ಲಡ್ಡು ಪ್ರಸಾದ ಮಾರಾಟದಿಂದ 9,67,27,180 ರೂಪಾಯಿ ಹಾಗೂ ದೇವಸ್ಥಾನದ ಹುಂಡಿಯಲ್ಲಿ 2,55,97,567 ರೂ. ಸೇರಿದಂತೆ 2024ರ ಹಾಸನಾಂಬೆ ದರ್ಶನೋತ್ಸವವವೂ ಸೇರಿ ಒಟ್ಟು 12,63,83,808 ರೂಪಾಯಿ ಆದಾಯ ಬಂದಿದೆ. ಇದರ ಜೊತೆಗೆ 51 ಗ್ರಾಂ ಚಿನ್ನ ಹಾಗೂ 913 ಗ್ರಾಂ ಬೆಳ್ಳಿ ಕಾಣಿಕೆಯಾಗಿದೆ ಬಂದಿದೆ. ಹಾಸನಾಂಬೆ ದರ್ಶನದ ಇತಿಹಾಸದಲ್ಲೇ ಹರಿದುಬಂದ ದಾಖಲೆಯ ಆದಾಯ ಇದಾಗಿದೆ.

ಕಳೆದ ವರ್ಷಕ್ಕಿಂತ ಈ ವರ್ಷ ಅಧಿಕ ಭಕ್ತರು ಆಗಮಿಸಿದ್ದರಿಂದ ದರ್ಶನ ವ್ಯವಸ್ಥೆಯಲ್ಲಿ ಕೊಂಚ ಅಸ್ತವ್ಯಸ್ತವಾಗಿದೆ. ಸರಿಯಾದ ವ್ಯವಸ್ಥೆ ಇಲ್ಲದೇ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರು ಪರದಾಡಿದರು. ಜಿಲ್ಲಾಡಳಿತ ವಿರುದ್ಧ ಆರೋಪಗಳು ಕೇಳಿಬರುತ್ತಲ್ಲೇ ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸಿ ಸುಗಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆಗ ಕೊಂಚ ಪರಿಸ್ಥಿತಿ ಸುಧಾರಣೆಯಾಯ್ತು.

ಈ ವರ್ಷದ ಹಾಸನಾಂಬೆಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿದೆ. ಮುಂದಿನ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಅಂದ್ರೆ 15 ದಿನಗಳ ಕಾಲ ಹಾಸನಾಂಬೆ ಉತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ