CrimeNEWSನಮ್ಮಜಿಲ್ಲೆ

ಜಾನುವಾರುಗಳ ಮೇಲೆ ದಾಳಿ ಮಾಡಿ ರೈತರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ ಬಿತ್ತು

ವಿಜಯಪಥ ಸಮಗ್ರ ಸುದ್ದಿ

ಕೊಳ್ಳೇಗಾಲ: ಜನ ಜಾನುವಾರುಗಳ ಮೇಲೆ ದಾಳಿ ಮಾಡುತ್ತಾ ರೈತರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದ ಬಳಿ ದೊಡ್ಡ ಹಳ್ಳದಲ್ಲಿ ನಡೆದಿದೆ.

ಈ ಚಿರತೆಯು ತಾಲೂಕಿನ ಗ್ರಾಮಗಳಾದ ಸತ್ಯಗಾಲ, ಚೆಲುವನಹಳ್ಳಿ, ಧನಗೆರೆ, ಪಾಳ್ಯ, ಉಗನಿಯ, ಗುಂಡೇಗಾಲ, ಗ್ರಾಮಗಳಲ್ಲಿ ದಾಳಿ ಮಾಡಿ ಗ್ರಾಮಸ್ಥರಲ್ಲಿ ಮತ್ತು ರೈತರಲ್ಲಿ ಭಯ ಹುಟ್ಟಿಸಿತ್ತು.

ರೈತರು ಇದರಿಂದ ಜಮೀನಿಗೆ ತೆರಳಲು ಭಯಪಡುವಂತಾಗಿತ್ತು. ಈಗಾಗಲೇ ಚಿರತೆಯು ರೈತರು ಸಾಕಿದ್ದ ಮೇಕೆಗಳು ಹಾಗೂ ನಾಯಿಗಳ ಮೇಲೆ ದಾಳಿ ನಡೆಸಿ ಕೊಂದು ಹಾಕಿತ್ತು.

ಚಿರತೆಯ ಕಾಟದಿಂದ ಬೇಸತ್ತ ರೈತರು ಮತ್ತು ಗ್ರಾಮಸ್ಥರು ಕೂಡಲೇ ಸ್ಥಳೀಯ ಅರಣ್ಯ ಇಲಾಖೆಗಳಿಗೆ ಮಾಹಿತಿ ನೀಡಿ ಚಿರತೆಯನ್ನು ಸೆರೆಹಿಡಿಯುವಂತೆ ಮನವಿ ಮಾಡಿದ್ದರು.

ಅದರಂತೆ ಸ್ಥಳಕ್ಕೆ ಬಂದ ಅಧಿಕಾರಿಗಳು ಪರಿಶೀಲನೆ ನಡೆಸಿ ಚಿರತೆ ಓಡಾಡುತ್ತಿರುವುದು ಖಚಿತವಾದ ಹಿನ್ನೆಲೆಯಲ್ಲಿ ಗುಂಡೇಗಾಲ ದೊಡ್ಡ ಹಳ್ಳದ ಬಳಿ ಬೋನನ್ನು ಇರಿಸಿದ್ದರು.

ಆದರೆ ಕಳೆದ ಒಂದೂವರೆ ತಿಂಗಳಿಗಳಿಂದ ಬೋನಿಗೆ ಬೀಳದೆ ತಪ್ಪಿಸಿಕೊಂಡಿದ್ದ ಚಿರತೆ ಮಂಗಳವಾರ ಬೆಳಗಿನ ಜಾವ ಬೋನಿಗೆ ಬಿದ್ದಿದ್ದು, ಇದರಿಂದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು