CrimeNEWSಸಿನಿಪಥ

ಡ್ರಗ್ಸ್ ಪ್ರಕರಣ: ನಟಿ ಸೋನಿಯಾ ಅಗರ್ವಾಲ್ ಮನೆಯ ಮೇಲೆ ದಾಳಿ- 40 ಗ್ರಾಂ ಗಾಂಜಾ ವಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್ ಮನೆಯ ಮೇಲೆ ದಾಳಿ ನಡೆಸಿದ ಪೂರ್ವ ವಲಯದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಂಡಿದ್ದಾರೆ.

ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿಯ ಸಮಯದಲ್ಲಿ ಸೋನಿಯಾ ಅಗರ್ವಾಲ್ ಮನೆಯಲ್ಲಿ ಇರಲಿಲ್ಲ. ಭಾನವಾರ ರಾತ್ರಿ ಪಾರ್ಟಿಗೆ ಹೋಗಿದ್ದ ಆಕೆ ಮನೆಗೆ ಬಂದಿರಲಿಲ್ಲ.

ದಾಳಿ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಆಕೆಗೆ ಕರೆ ಮಾಡಿದ್ದಾರೆ. ಈ ವೇಳೆ ಆಕೆ ಕರೆಯನ್ನು ಸ್ವೀಕರಿಸಲಿಲ್ಲ. ಆ ಬಳಿಕ ಆಕೆಯ ತಂದೆಯಿಂದ ಫೋನ್ ಕರೆ ಮಾಡಿಸಿದ್ದಾರೆ. ಈ ವೇಳೆ ಆಕೆ ಮಧ್ಯಾಹ್ನ 12 ಗಂಟೆಗೆ ಬರುವುದಾಗಿ ಹೇಳಿದ್ದಾಳೆ. ಅಗರ್ವಾಲ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯ ತಂದೆಯಿಂದ ಕೀ ತೆಗೆಸಿ ಮನೆಯನ್ನು ಜಾಲಾಡಿದ್ದಾರೆ. ಈ ವೇಳೆ 40 ಗ್ರಾಂ ಗಾಂಜಾ ಪತ್ತೆಯಾಗಿದೆ.

ಆರ್ಗ್ಯಾನಿಕ್ ಕಾಸ್ಮೆಟಿಕ್ ಕಂಪನಿ ನಡೆಸುತ್ತಿದ್ದ ಸೋನಿಯಾ ಜೊತೆ ಡಜನ್‍ಗಟ್ಟಲೇ ಸೆಲೆಬ್ರಿಟಿಗಳ ಲಿಂಕ್ ಇರುವುದು ಗೊತ್ತಾಗಿದೆ. ಎಲ್ಲಾ ಪಾರ್ಟಿಗಳಲ್ಲಿ ಸೋನಿಯಾ ಅಗರ್ವಾಲ್ ಮುಖಾಂತರ ಸೆಲೆಬ್ರಿಟಿಗಳು ಎಂಟ್ರಿ ಕೊಡುತ್ತಿದ್ದರು.

ಥಾಮಸ್ ನಿಂದ ಡ್ರಗ್ಸ್ ಪಡೆದುಕೊಳ್ಳುತ್ತಿದ್ದ ಸೋನಿಯಾ ಆ ಬಳಿಕ ಬೇಕಾದ ಸೆಲೆಬ್ರಿಟಿಗಳಿಗೆ ಪೂರೈಸುತ್ತಿದ್ದ ಬಗ್ಗೆ ಪೊಲೀಸರಿಗೆ ಬಲವಾದ ಸಂಶಯ ಮೂಡಿದೆ. ಕೆಲ ರಾಜಕಾರಣಿಗಳ ಮಕ್ಕಳು ಮತ್ತು ಸ್ಯಾಂಡಲ್‍ವುಡ್‍ನವರ ಜೊತೆ ಸೋನಿಯಾಗೂ ಉತ್ತಮ ಸಂಬಂಧ ಇತ್ತು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಈ ದಾಳಿಗೆ  ಯಾಕಾಗಿ?: 15 ದಿನ ಹಿಂದೆ ಡ್ರಗ್ ಪೆಡ್ಲರ್ ಆರೋಪಿ ಥಾಮಸ್‍ನನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದರು. ಆರೋಪಿ ಥಾಮಸ್ ಜೊತೆ ಈ ವ್ಯಕ್ತಿಗಳು ನಿರಂತರ ಸಂಪರ್ಕದಲ್ಲಿದ್ದ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಬಂಧಿತ ವಿದೇಶಿ ಪ್ರಜೆ ಥಾಮಸ್ ಜೊತೆ ದಾಳಿಗೆ ಒಳಗಾದ ವ್ಯಕ್ತಿಗಳಿಗೆ ನೇರವಾದ ಸಂಪರ್ಕ ಇತ್ತು. ಹಲವು ಪಾರ್ಟಿಗಳಿಗೆ ಎಂಡಿಎಂಎ(ಮೀಥೈಲ್ ಎನೆಡಿಯಾಕ್ಸಿ ಮೆಥಾಂಫೆಟಮೈನ್ ನನ್ನು ಎಕ್‍ಸಸ್ಟಿ ಮಾತ್ರೆ ಎಂದು ಕರೆಯಲಾಗುತ್ತದೆ) ಮಾತ್ರೆಗಳು ಮತ್ತು ಎಲ್‍ಎಸ್‍ಡಿ(ಲೈಸರ್ಜಿಕ್ ಆಸಿಡ್ ಡೈಥೈಲಾಮೈಡ್) ಮಾತ್ರೆಗಳನ್ನು ಈತ ವಿತರಿಸಿದ್ದ. ವಿಚಾರಣೆ ವೇಳೆ ಥಾಮಸ್ ಸೆಲೆಬ್ರಿಟಿಗಳ ಒಂದಷ್ಟು ಹೆಸರುಗಳನ್ನ ಪ್ರಸ್ತಾಪಿಸಿದ್ದ.

ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್, ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ರಾಜಾಜಿನಗರ, ಪದ್ಮನಾಭನಗರದ, ಬೆನ್ಸೆನ್ ಟೌನ್ ನಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಿ ಹುಡುಕಾಟ ನಡೆಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು