NEWSನಮ್ಮಜಿಲ್ಲೆಸಂಸ್ಕೃತಿ

ಮಾದಪ್ಪನಿಗೂ ಮೋಸ ಮಾಡಿದ ಭಕ್ತರು: ಕಾಣಿಕೆ ಹುಂಡಿಯಲ್ಲಿ ಅಮಾನ್ಯಗೊಂಡ ಲಕ್ಷಾಂತರ ರೂ. ನೋಟುಗಳು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಹನೂರು: ಇತಿಹಾಸ ಪ್ರಸಿದ್ಧ ಯಾತ್ರಸ್ಥಳವಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ಹುಂಡಿ ತೆರೆದು ಎಣಿಕೆ ಮಾಡಿದಾಗ ಅಮಾನ್ಯಗೊಂಡಿರುವ ಲಕ್ಷಾಂತರ ರೂಪಾಯಿ ನೋಟುಗಳು ಪತ್ತೆಯಾಗಿವೆ.

ಈ ಮೂಲಕ ಮಾದಪ್ಪನಿಗೂ ಮೋಸ ಮಾಡುವ ಮೂಲಕ ದೇವರನ್ನೇ ಯಾಂಾಋಿಸಿದ್ದಾರೆ ಭಕ್ತರು. ಬೌದು! ಅಮಾನ್ಯಗೊಂಡು 7 ವರ್ಷಗಳ ಬಳಿಕ ಗರಿಷ್ಠ ಮೌಲ್ಯದ ಲಕ್ಷಾಂತರ ರೂಪಾಯಿ ಹಣ ಮಾದಪ್ಪನ ಹುಂಡಿ ಸೇರಿದೆ.

ಕಳೆದ ಮಂಗಳವಾರ ದೇವಾಲಯ ಹುಂಡಿ ಎಣಿಕೆ ವೇಳೆ ಚಲಾವಣೆಯಲ್ಲಿ ಇಲ್ಲದ ನೋಟುಗಳು ಪತ್ತೆಯಾಗಿದ್ದವು. ಅದಾದ ಬಳಿಕ, ಇಂದು ಅವುಗಳನ್ನು ಎಣಿಕೆ ಮಾಡಲಾಗಿದೆ.

1ಸಾವಿರ ಮುಖಬೆಲೆಯ ನೋಟುಗಳು 677 ಇದ್ದು, (6,77,000) ಹಾಗೂ 500 ಮುಖಬೆಲೆಯ ನೋಟುಗಳು 4, 353 (21,76,500) ಇದೆ. ಹೀಗೆ ಒಟ್ಟು 28,53,500 ನೋಟುಗಳನ್ನು ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ.

2000 ಮುಖಬೆಲೆಯ ನೋಟುಗಳು 3.56 ಲಕ್ಷದಷ್ಟು ಸಂಗ್ರಹವಾಗಿದ್ದು, ಈ ನೋಟುಗಳು ವಿನಿಮಯ ಮಾಡಿಕೊಳ್ಳಬಹುದಾಗಿದೆ. ಆದರೆ 28 ಲಕ್ಷದಷ್ಟು ಹಣ ಹುಂಡಿ ಸೇರಿದರೂ ಪ್ರಾಧಿಕಾರದ ಪ್ರಯೋಜನಕ್ಕೆ ಬಾರದಂತಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು