CrimeNEWSಆರೋಗ್ಯನಮ್ಮಜಿಲ್ಲೆ

ವೈದ್ಯರ ನಿರ್ಲಕ್ಷ್ಯ, ಖಾಸಗಿ ಆಸ್ಪತ್ರೆಯ ಹಣದಾಹಕ್ಕೆ ಬಾಣಂತಿ ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವೈದ್ಯರ ನಿರ್ಲಕ್ಷ್ಯ ಮತ್ತು ಖಾಸಗಿ ಆಸ್ಪತ್ರೆಯ ಹಣದಾಹಕ್ಕೆ ಬಾಣಂತಿಯೊಬ್ಬರ ಜೀವಹೋಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಓಲ್ಡ್ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಕ್ಲೌಡ್ ನೈನ್ ಆಸ್ಪತ್ರೆ ವಿರುದ್ಧ ಬಾಣಂತಿ ಜನನಿಯ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕ್ಲೌಡ್ ನೈನ್‌ ಆಸ್ಪತ್ರೆಯ ವೈದ್ಯರು ಗರ್ಭಿಣಿ ಜನನಿಗೆ ಅವಧಿಗೆ ಮುಂಚೆಯೇ ಅಂದ್ರೆ 65 ದಿನಗಳ ಮುನ್ನವೇ ಆಪರೇಷನ್ ಮಾಡಿಸಿದ್ದಾರಂತೆ. ಈ ವೇಳೆ ಜನನಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇದಾದ ಮೇಲೆ ನಡೆದಿದ್ದು ಘನಘೋರ ದುರಂತ.

ಹೆರಿಗೆ ಆದ ಬಳಿಕ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ 20 ದಿನಗಳ ಕಾಲ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ ಜನನಿ ಬಳಿಕ ಸಾವನ್ನಪ್ಪಿದ್ದಾರೆ. ಇಷ್ಟು ದಿನದ ವರೆಗೂ ಆಸ್ಪತೆಯಲ್ಲೇ ಇರಿಸಿಕೊಂಡಿದ್ದರು. ಇದೀಗ ಬಾಣಂತಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದು, ಈಗ ಮೃತದೇಹ ಕೊಡಲು ಮತ್ತೆ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಲಾಗಿದೆ.

ಅಸಲಿಗೆ ಆಗಿದ್ದೇನು?: ಗರ್ಭಿಣಿಯಾಗಿದ್ದ ಜನನಿಗೆ ಜುಲೈ-5ಕ್ಕೆ ಡೆಲಿವರಿ ಡೇಟ್ ನೀಡಲಾಗಿತ್ತು. ಆದರೆ ಮೇ 2ಕ್ಕೆ ಕ್ಲೌವ್ಡ್ ನೈನ್ ಆಸ್ಪತ್ರೆಯಲ್ಲಿ ಅವಧಿಗೂ ಮುನ್ನವೇ ಅಂದ್ರೆ ಎರಡು ತಿಂಗಳ‌ ಮೊದಲೇ ವೈದ್ಯರು ಡೆಲಿವರಿ ಮಾಡಿದ್ರಂತೆ. ಈ ವೇಳೆ ಇಂಟರ್ನೆಲ್ ಬ್ಲೀಡಿಂಗ್ ಆಗಿ ತಾಯಿ ಸ್ಥಿತಿ ಚಿಂತಾಜನಕವಾಗಿದೆ. ಈ ಬಗ್ಗೆ ಜನನಿ ಗಂಡನಿಗೂ ವೈದ್ಯರು ಯಾವುದೇ ಮಾಹಿತಿ ನೀಡಿಲ್ಲವಂತೆ.

ತಾಯಿ ಚಿಂತಾಜನಕ ಸ್ಥಿತಿಯಲ್ಲಿದ್ದಾಗ ಕ್ಲೌವ್ಡ್‌ನೈನ್ ಆಸ್ಪತ್ರೆ ವೈದ್ಯರು ಮತ್ತೊಂದು ಯಡವಟ್ಟು ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಬಾಣಂತಿಯನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ‌ಮಾಡಿದ್ದಾರೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಜನನಿ 20 ದಿನ ಸಾವು ಬದುಕಿನ ನಡುವೆ ಹೋರಾಡಿ ಕೊನೆಯುಸಿರೆಳೆದಿದ್ದಾರೆ.

ಮೃತದೇಹಕ್ಕೆ ₹10 ಲಕ್ಷ ಬೇಡಿಕೆ: ಗಂಭೀರ ಸ್ಥಿತಿಯಲ್ಲಿದ್ದ ಜನನಿ ಮಣಿಪಾಲ್ ಆಸ್ಪತ್ರೆಯಲ್ಲಿ ಬುಧವಾರ ‌ಕೊನೆಯುಸಿರೆಳೆದಿದ್ದಾರೆ. ಬಾಣಂತಿಯ ಮೃತದೇಹ‌ ಕೊಡಲು ಮಣಿಪಾಲ್ ಆಸ್ಪತ್ರೆಯವರು ಹಿಂದೇಟು ಹಾಕಿದ್ದರಂತೆ. 10 ಲಕ್ಷ ರೂಪಾಯಿ ಕೊಟ್ಟು ಮೃತದೇಹ ತಗೆದುಕೊಂಡು ಹೋಗಿ ಅಂತ ಮಣಿಪಾಲ್ ಆಸ್ಪತ್ರೆಯವರು ಹೇಳಿದ್ದಾರಂತೆ

ಮಣಿಪಾಲ್ ಆಸ್ಪತ್ರೆಗೆ ನಾವು ಶಿಫ್ಟ್ ಮಾಡಿಲ್ಲ. ನಾವ್ಯಾಕೆ ದುಡ್ಡು ಕೊಡ್ಬೇಕು? ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು ಕ್ಲೌವ್ಡ್ ನೈನ್‌ ಆಸ್ಪತ್ರೆಯವರು. ನೀವು ಅವರ ಹತ್ರನೇ ದುಡ್ಡು ಕೇಳಿ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ.

ಕುಟುಂಬಸ್ಥರು ಹೇಳೋದೇನು?: ಜನನಿಯನ್ನು ಕ್ಲೌವ್ಡ್‌ನೈನ್ ಆಸ್ಪತ್ರೆಗೆ ಸೇರಿಸುವಾಗಲೇ 1 ಲಕ್ಷ 30 ಸಾವಿರ ರೂಪಾಯಿ ಬಿಲ್ ಆಗಬಹುದು ಅಂದಿದ್ರು. ತಾಯಿ ಮಗುವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಲ್ಲ. ಆದರೆ ಒಂದು ಲಕ್ಷದ ಮೂವತ್ತು ಸಾವಿರ ಬಿಲ್ ಅಂತ ಹೇಳಿದ್ದರು. ಬಳಿಕ ಜನನಿ ಕುಟುಂಬಸ್ಥರಿಂದ ಬರೋಬ್ಬರಿ ₹30 ಲಕ್ಷ ರೂಪಾಯಿ ಖರ್ಚು ಮಾಡಿಸಲಾಗಿದೆ. ಆದರೂ ಜನನಿಯನ್ನು ಉಳಿಸಿಲ್ಲ ಎಂದು ಆರೋಪಿಸಿದ್ದಾರೆ.

ಇರೋದನ್ನೆಲ್ಲಾ ಮಾರಾಟ ಮಾಡಿ ದುಡ್ಡು ಹೊಂದಿಸಿದ್ದೇವೆ. ಇನ್ನು ನಮ್ ಕೈಯಲ್ಲಿ ಏನಿಲ್ಲ ಖರ್ಚು ಮಾಡೋಕೆ. ಇಷ್ಟು ಖರ್ಚು ಮಾಡಿದ್ರೂ ನನ್ನ ಹೆಂಡತಿಯನ್ನು ಉಳಿಸಿಕೊಳ್ಳೋಕೆ ಆಗಿಲ್ಲ ಎಂದು ಗಂಡ ಕಣ್ಣೀರು ಹಾಕುತ್ತಿದ್ದಾರೆ. ಮಗಳನ್ನು ಉಳಿಸಿಕೊಳ್ಳೋಕಾಗಿಲ್ಲ ಎಂದು ಜನನಿ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

ಇಷ್ಟೆಲ್ಲಾ ಆದ್ರೂ ಇನ್ನೂ ಕುಟುಂಬಸ್ಥರಿಗೆ ಬಾಣಂತಿಯ ಮೃತದೇಹ ಹಸ್ತಾಂತರ ಆಗಿಲ್ಲ. ಸದ್ಯ ಜನನಿ ಮೃತದೇಹ ಮಣಿಪಾಲ್ ಆಸ್ಪತ್ರೆಯಲ್ಲಿದೆ. ಮೃತದೇಹ ಕೊಡದಿದ್ರೆ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು