NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ವೇತನ ಹೆಚ್ಚಳ ಹಿಂಬಾಕಿ ಸಂಬಂಧ ಅ.19ರಂದು ಜಂಟಿ ಕ್ರಿಯಾಸಮಿತಿ ನೇತೃತ್ವದಲ್ಲಿ ನಿವೃತ್ತ ನೌಕರರ ಧರಣಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಜಯಪಥ ವರದಿಯಿಂದ ಎಚ್ಚೆತ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಜಂಟಿ ಕ್ರಿಯಾಸಮಿತಿ ಇದೇ ಅ.19ರಂದು ನಿವೃತ್ತ ನೌಕರರು ಹಮ್ಮಿಕೊಂಡಿರುವ ಒಂದು ದಿನದ ಧರಣಿ ಸತ್ಯಾಗ್ರಹದ ನೇತೃತ್ವ ವಹಿಸುವುದಾಗಿ ತಿಳಿಸಿದೆ.

ಹೀಗಾಗಿ ಜಂಟಿ ಕ್ರಿಯಾ ಸಮಿತಿ ಮುಂದಾಳತ್ವದಲ್ಲಿ ನಿವೃತ್ತ ನೌಕರರು 01.01.2020 ರಿಂದ 28.02.2023 ರವರೆಗೆ ಸೇವೆಯಿಂದ ನಿವೃತ್ತಿ ಹೊಂದಿರುವ ಹಾಗೂ ಇತರೆ ಕಾರಣಗಳಿಂದ ಸೇವಾವಿಮುಕ್ತಿ ಹೊಂದಿರುವ ನೌಕರರಿಗೆ ಪರಿಷ್ಕೃತ ವೇತನ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಇದೇ ಅ.19ರಂದು ಬೆಳಗ್ಗೆ 11ಗಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ ಎಂಬುವುದು ಸ್ಪಷ್ಟವಾಗಿದೆ.

ವೇತನ ಹೆಚ್ಚಳ ಹಿಂಬಾಕಿ ಸಂಬಂಧ ಜಂಟಿ ಕ್ರಿಯಾ ಸಮಿತಿ ಎಂಡಿ ಅವರಿಗೆ ಅ.10ರಂದು ಮನವಿ ಸಲ್ಲಿಸಿದ್ದು, ಆ ವೇಳೆ ನಿವೃತ್ತ ನೌಕರರು ಅ.19ರಂದು ಧರಣಿ ಹಮ್ಮಿಕೊಂಡಿದ್ದಾರೆ ಎಂದು ತಿಳಿಸಿತ್ತು. ಈ ಬಗ್ಗೆ ವಿಜಯಪಥ ವರದಿ ಮಾಡಿ ನಿವೃತ್ತ ನೌಕರರಿಂದ ಎಂದಷ್ಟೇ ಇದೆ ಇದರ ನೇತೃತ್ವ ಯಾರು ವಹಿಸುತ್ತಿದ್ದಾರೆ ಎಂಬುವುದೇ ಇಲ್ಲ ಎಂಬುದನ್ನು ಸಮಗ್ರವಾಗಿ ವಿವರಿಸಿದ್ದರಿಂದ ಎಚ್ಚೆತ್ತ ಕ್ರಿಯಾ ಸಮತಿ ತಾನೆ ನೇತೃತ್ವ ವಹಿಸುವುದಾಗಿ ಸ್ಪಷ್ಟಪಡಿಸಿದೆ.

ಎಂಡಿ ಅವರಿಗೆ ಸಲ್ಲಿಸಿದ್ದ ಮನವಿ ಪತ್ರದಲ್ಲೇನಿದೆ: ರಾಜ್ಯ ಸರ್ಕಾರ 17,03.2023 ರಂದು ಹೊರಡಿಸಿರುವ ಆದೇಶದ ಮೇರೆಗೆ (ಟಿಡಿ 12 ಟಿಸಿಬಿ 2023, ಬೆಂಗಳೂರು ದಿನಾಂಕ 17.03.2023) ತಾವು ಎಲ್ಲ ನೌಕರರಿಗೂ 31.12.2019 ರಂದು ಪಡೆಯುತ್ತಿದ್ದ ಮೂಲ ವೇತನವನ್ನು ಶೇಕಡಾ 15ರಂತೆ ಹೆಚ್ಚಿಸಿ ಅದರಂತೆ ವೇತನ ಶ್ರೇಣಿಗಳನ್ನು ಪರಿಷ್ಕರಿಸಿ 01.03.2023 ರಿಂದ ಜಾರಿಗೊಳಿಸಲು ತಾವು ಆದೇಶ ನೀಡಿರುತ್ತೀರಿ, ಅಂದರೆ ಈ ಎಲ್ಲ ನೌಕರರಿಗೂ ಕಾಲಕಾಲಕ್ಕೆ ಬರುತ್ತಿದ್ದ ವಾರ್ಷಿಕ ವೇತನ ಬಡ್ತಿಯನ್ನು (Increment) ಕೊಟ್ಟು ಸ್ಥಿರೀಕರಣ (Fixation) ಸೌಲಭ್ಯದೊಂದಿಗೆ ಹೊಸ ವೇತನ ಶ್ರೇಣಿಗೆ ತರಲಾಗಿದೆ.

01.01.2020 ರಿಂದ 28,02,2023 ರವರೆಗೆ ಹಲವಾರು ನೌಕರರು ನಾಲ್ಕೂ ರಾಜ್ಯ ಸಾರಿಗೆ ನಿಗಮಗಳಲ್ಲೂ ನಿವೃತ್ತಿ ಹೊಂದಿದ್ದಾರೆ. ಕೆಲವರು ಮೃತರಾಗಿದ್ದಾರೆ. ಇನ್ನು ಕೆಲವರೂ ಸ್ವಯಂ ನಿವೃತ್ತಿ ಹೊಂದಿರುತ್ತಾರೆ. ಹಾಗೂ ಕೆಲವರು ರಾಜೀನಾಮೆ ಕೊಟ್ಟಿರುತ್ತಾರೆ. ಈ ಎಲ್ಲ ನೌಕರರಿಗೂ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಪರಿಷ್ಕರಣೆ ಆಗಿಲ್ಲ.

ಈ ಹಿಂದೆ ಸಾರಿಗೆ ನಿಗಮದಲ್ಲಿ ವೇತನ ಹೆಚ್ಚಳವಾದಾಗ ಈ ಎಲ್ಲ ವರ್ಗದ ನೌಕರರಿಗೂ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ನಿಗದಿ ಮಾಡಲಾಗುತ್ತಿತ್ತು. ಇದರಿಂದ ಅಂತಹ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ದೊರಕುವ ವೇತನ ಹೆಚ್ಚಳ, ಅರಿಯರ್ಸ್ ಬಾಕಿ, ನಿವೃತ್ತಿಯ ಎಲ್ಲ ಸೌಲಭ್ಯಗಳು ದೊರೆಯುತ್ತಿತ್ತು.

ಈಗ ಕೇಂದ್ರ ಕಚೇರಿಯು ಸುತ್ತೋಲೆ ಸಂಖ್ಯೆ 16/2023 ದಿನಾಂಕ 28.03.2023 ರಂದು ಹೊರಡಿಸಿರುವ ಆದೇಶದಲ್ಲಿ ಈ ಅಂಶಗಳು ಕಂಡುಬರದೆ ಇರುವುದರಿಂದ ಸಹಸ್ರಾರು ನೌಕರರು ವೇತನ ಪರಿಷ್ಕರಣೆಯ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಈ ನೌಕರರಿಗೂ ಹೊಸ ಶ್ರೇಣಿಗಳಲ್ಲಿ 01.01.2020 ರಿಂದ ವೇತನ ಪರಿಷ್ಕರಿಸಿದರೆ ಅವರಿಗೆ ಬರಬೇಕಾದ ಗ್ರಾಚ್ಯುಟಿ ಹೆಚ್ಚಳ, ರಜಾ ನಗದೀಕರಣ ಹೆಚ್ಚಳದ ಇತ್ಯಾದಿ ಆರ್ಥಿಕ ಸೌಲಭ್ಯಗಳ ವ್ಯತ್ಯಾಸದ ಮೊತ್ತ ಬರುತ್ತದೆ.

21,09,2023 ರಂದು ಹಲವಾರು ನಿವೃತ್ತ ನೌಕರರ ಪರವಾಗಿ ನಮ್ಮ ಜಂಟಿ ಕ್ರಿಯಾ ಸಮಿತಿಯ ನಾಯಕರು ತಮ್ಮನ್ನು ಭೇಟಿ ಮಾಡಿ ಈ ನೌಕರರಿಗೆ ಆಗಿರುವ ನೋವನ್ನು ತಮಗೆ ತಿಳಿಸಿದ್ದಾರೆ. ಆದರೂ ಕೂಡ ಈವರೆಗೂ ಯಾವುದೇ ತೀರ್ಮಾನ ಆಗಿಲ್ಲದ ಕಾರಣ, ಸದರಿ ನೌಕರರು 19:10,2023 ಗುರುವಾರದಂದು ಬೆಳಗ್ಗೆ 11 ಗಂಟೆಯಿಂದ ಒಂದು ದಿನದ ಧರಣಿ ಸತ್ಯಾಗ್ರಹವನ್ನು ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದಾರೆ ಎಂದು ಜಂಟಿ ಕ್ರಿಯಾ ಸಮಿತಿ ಹೇಳಿತ್ತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು